Friday, May 17, 2024
Homeತಾಜಾ ಸುದ್ದಿಚಂದ್ರಶೇಖರ್‌ ಗುರೂಜಿ ಹತ್ಯೆ ಪ್ರಕರಣದ ಇಬ್ಬರು ಹಂತಕರು ಅರೆಸ್ಟ್:‌ ಘಟನೆ ನಡೆದ ನಾಲ್ಕು ಗಂಟೆಯಲ್ಲೇ ಆರೋಪಿಗಳ...

ಚಂದ್ರಶೇಖರ್‌ ಗುರೂಜಿ ಹತ್ಯೆ ಪ್ರಕರಣದ ಇಬ್ಬರು ಹಂತಕರು ಅರೆಸ್ಟ್:‌ ಘಟನೆ ನಡೆದ ನಾಲ್ಕು ಗಂಟೆಯಲ್ಲೇ ಆರೋಪಿಗಳ ಹೆಡೆಮುರಿ ಕಟ್ಟಿದ ಹುಬ್ಬಳ್ಳಿ ಪೊಲೀಸರು 

spot_img
- Advertisement -
- Advertisement -

ಹುಬ್ಬಳ್ಳಿ: ಇಂದು ನಗರದ ಖಾಸಗಿ ಹೋಟೆಲ್ ಬಳಿಯಲ್ಲಿ 40ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಚಂದ್ರಶೇಖರ್‌ ಗುರೂಜಿ ಹತ್ಯೆ ಮಾಡಿದ್ದಂತ ಹಂತಕರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಕೊಲೆಯಾದಂತ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹತ್ಯೆ ನಡೆದ 4 ಗಂಟೆಯಲ್ಲೇ ಆರೋಪಿಗಳನ್ನು ಹೆಡೆಮುರಿ ಕಟ್ಟಿ ಎಳೆದು ತಂದಿದ್ದಾರೆ ಪೊಲೀಸರು. ಪೋಲೀಸರ ಕಾರ್ಯಕ್ಕೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ.

ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಹುಬ್ಬಳ್ಳಿಯ ವಿದ್ಯಾನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಅಲ್ಲದೇ ಅವರನ್ನು ಹುಬ್ಬಳ್ಳಿ ಧಾರವಾಡ ಪೊಲೀಸರು ವಶಕ್ಕೆ ಪಡೆದಿರೋದಾಗಿ ತಿಳಿದು ಬಂದಿದೆ. ಬಂಧಿತರ ಬಗ್ಗೆ ಪೊಲೀಸರು ಖಚಿತ ಮಾಹಿತಿಯನ್ನು ನೀಡಬೇಕಿದೆ. ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗಿದೆ. ನಗರದ ಪ್ರೆಸಿಡೆಂಟ್ ಹೋಟೆಲ್‌ನಲ್ಲಿ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವ್ರನ್ನ ಬರ್ಬರವಾಗಿ ಚಾಕುವಿನಿಂದ ಇರಿದು ಹತ್ಯೆಗೈಯಲಾಗಿತ್ತು

- Advertisement -
spot_img

Latest News

error: Content is protected !!