ಬೆಂಗಳೂರು: ತಲಘಟ್ಟಪುರ ಠಾಣೆ ವ್ಯಾಪ್ತಿಯಲ್ಲಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪ್ರೇಮಿಗಳಿಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಇದೀಗ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡವರು ಕೋಣನಕುಂಟೆ ನಿವಾಸಿ ಶ್ರೀಕಾಂತ್(24) ಮತ್ತು ತಲಘಟ್ಟಪುರ ಸಮೀಪದ ಅಂಜನಾಪುರದ ನಿವಾಸಿ ಅಂಜನಾ(20) ಎಂದು ತಿಳಿದು ಬಂದಿದೆ. ಜುಲೈ 1ರಂದು ನಾಪತ್ತೆಯಾಗಿದ್ದು, ಮಂಗಳವಾರ ಸಂಜೆ ಇಬ್ಬರ ಮೃತದೇಹ ನೈಸ್ ರಸ್ತೆಯ ತುಳಸಿಪುರ ಕೆರೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದರು.
ಪ್ರಕರಣದ ವಿವರ: ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿ.ಕಾಂ ಅಂತಿಮ ವರ್ಷದಲ್ಲಿ ಓದುತ್ತಿದ್ದ ಶ್ರೀಕಾಂತ್ 1 ವರ್ಷದ ಹಿಂದೆ ಸಹನಾ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಈತ ಸಂಜೆ ಹೊತ್ತು ಆಟೋ ಕೂಡ ಓಡಿಸುತ್ತಿದ್ದ. ಆ ನಂತರ ಕಾಲೇಜಿಗೆ ಹೋಗುತ್ತಿದ್ದ. ಇದೇ ಕಾಲೇಜಿನಲ್ಲಿ ಓದುತ್ತಿದ್ದ ಅಂಜನಾಳ ಪರಿಚಯ, ಪ್ರೇಮಕ್ಕೆ ತಿರುಗಿದೆ. ಈ ವಿಚಾರಕ್ಕೆ ಶ್ರೀಕಾಂತ್ ಮತ್ತು ಆತನ ಪತ್ನಿಯ ನಡುವೆ ಜಗಳ ನಡೆದಿತ್ತು. ಅಲ್ಲದೇ ಅಂಜನಾ ಪೋಷಕರು ಇಬ್ಬರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದರು. ಅದರಿಂದ ಬೇಸರಗೊಂಡಿದ್ದ ಶ್ರೀಕಾಂತ್ ಪ್ರೇಯಸಿ ಅಂಜನಾ ಜತೆ ಮನೆ ಬಿಟ್ಟು ಹೋಗಿದ್ದ. ಈ ಸಂಬಂಧ ಕೋಣನಕುಂಟೆ ಮತ್ತು ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಗಳ ತನಿಖೆ ಬೆನ್ನತ್ತಿದ್ದಾಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದರು.
ಇನ್ನು ಈ ವಿಚಾರವನ್ನು ಅರಿತಿದ್ದ ಶ್ರೀಕಾಂತ್ ಪತ್ನಿ ವಿಚ್ಛೇದನ ನೀಡಲು ಕೂಡ ಒಪ್ಪಿದ್ದರು. ನೆಮ್ಮದಿಯಿಂದ ಆಕೆ ಜತೆ ಜೀವನ ನಡೆಸಿ ಎಂದು ಪತಿ ಶ್ರೀಕಾಂತ್ಗೆ ಹೇಳಿದ್ದರು ಎಂದು ಹೇಳಲಾ ಗಿದೆ. ಆದರೂ ಶ್ರೀಕಾಂತ್, ಪ್ರೇಯಸಿ ಅಂಜನಾಳನ್ನು ಕರೆದೊಯ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಪ್ರೇಮಿಗಳಿಬ್ಬರು ಸಾವಿಗೂ ಮುನ್ನ ಪ್ರೇಮಿಗಳಿಬ್ಬರು ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹೀಗಾಗಿ ಸಾಯುತ್ತಿದ್ದೇವೆ ಎಂದು ಮೊಬೈಲ್ ನಲ್ಲಿ ಸೆಲ್ಫಿà ವಿಡಿಯೋ ಮಾಡಿ, ಸಂಬಂಧಿಕರಿಗೆ ಕಳುಹಿಸಿದ್ದಾರೆ. ಅಲ್ಲದೆ, 2 ಮೊಬೈಲ್ಗಳನ್ನು ಆಟೋದಲ್ಲಿಟ್ಟು ಕೆರೆಗೆ ಹಾರಿದ್ದಾರೆ. ಮೊಬೈಲ್ ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.