- Advertisement -
![]()
- Advertisement -
ಉಳ್ಳಾಲ: ಕರಾವಳಿಯಲ್ಲಿ ಕೊರೋನಾ ಅಟ್ಟಹಾಸ ಶರವೇಗದಲ್ಲಿ ಮುನ್ನುಗ್ಗುತ್ತಿದ್ದು, ಇಂದು ಬೆಳಿಗ್ಗೆ ಇಬ್ಬರು ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ.
ಮಂಗಳೂರು ಹೊರವಲಯದ ಸಂತೋಷ್ ನಗರ ನಿವಾಸಿ ಮತ್ತು ಉಳ್ಳಾಲ ನಿವಾಸಿ ಇಂದು ಕೋವಿಡ್ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ.
ಸಂತೋಷ್ ನಗರದ 52 ವರ್ಷದ ವ್ಯಕ್ತಿ ಹೃದಯರೋಗ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದರು.
ಉಳ್ಳಾಲದ ವ್ಯಕ್ತಿಯ ಹೆಚ್ಚಿನ ಮಾಹಿತಿ ತಿಳಿದಿಲ್ಲ. ಇಂದಿನ ಎರಡು ಸಾವು ಪ್ರಕರಣಗಳಿಂದ ಸೋಂಕಿತರ ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.
- Advertisement -


