Thursday, May 9, 2024
Homeತಾಜಾ ಸುದ್ದಿದೇವಸ್ಥಾನ ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ;  ಮಹಿಳೆ ಸೇರಿ ಇಬ್ಬರ ಹತ್ಯೆ

ದೇವಸ್ಥಾನ ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ;  ಮಹಿಳೆ ಸೇರಿ ಇಬ್ಬರ ಹತ್ಯೆ

spot_img
- Advertisement -
- Advertisement -

ತುಮಕೂರು: ದೇವಸ್ಥಾನ ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಮಹಿಳೆ ಸೇರಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕು ಮಿಡಿಗೇಶಿ ಗ್ರಾಮದಲ್ಲಿ  ನಡೆದಿದೆ.

ರಾಮಾಂಜನೇಯ(48)  ಹಾಗೂ ಶಿಲ್ಪಾ (38) ಕೊಲೆಯಾದವರು . ಘಟನೆಯಲ್ಲಿ ಮಲ್ಲಿಕಾರ್ಜುನಯ್ಯ ಎಂಬುವರಿಗೂ ಕೂಡ ಗಂಭೀರ ಗಾಯಗಳಾಗಿವೆ.

ಮಿಡಿಗೇಶಿ ಗ್ರಾಮದ ಶ್ರೀಧರ್ ಗುಪ್ತಾ ಎಂಬುವರು ಗಣಪತಿ ದೇವಸ್ಥಾನದ ಜಾಗ ಒತ್ತುವರಿ ಮಾಡಿಕೊಳ್ಳಲು ಯತ್ನಿಸಿದ್ದರು ಎಂಬ ಆರೋಪಸಲಾಗಿದೆ. ಇದರ ಸಂಬಂಧ ಗ್ರಾಮಸ್ಥರು ನ್ಯಾಯಾಲಯದ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಗ್ರಾಮಸ್ಥರ ಪರವಾಗಿ ತೀರ್ಪು ನೀಡಿತ್ತು.ದೇವಸ್ಥಾನದ ಪರ ರಾಮಾಂಜನೇಯ ಹಾಗೂ ಶಿಲ್ಪಾ ನ್ಯಾಯಾಲಯದ ಮೊರೆ ಹೋಗಿದ್ದರು. ಇದರಿಂದ ರೊಚ್ಚಿಗೆದ್ದ ಶ್ರೀಧರ್ ಗುಪ್ತ ಹಾಗೂ ಸಹಚರರು ನಿನ್ನೆ ರಾತ್ರಿ ಮಾರಕಾಸ್ತ್ರಗಳಿಂದ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ಮಾಹಿತಿಯಿಂದ ಲಭ್ಯವಾಗಿದೆ.

- Advertisement -
spot_img

Latest News

error: Content is protected !!