- Advertisement -
- Advertisement -
ಉಡುಪಿ: ಪ್ರವಾಸಕ್ಕೆಂದು ಬಂದು ಮುಂಜಾನೆಯೇ ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರನ್ನು ರಕ್ಷಣೆ ಮಾಡಲಾಗಿದೆ.
ಮಲ್ಪೆ ಸಮೀಪದ ತೊಟ್ಟಂ ಬೀಚ್ ನಲ್ಲಿ ಸಂಭವಿಸಿದ್ದು, ಬಳ್ಳಾರಿ ಜಿಲ್ಲೆಯ ಕೊಟ್ಟೂರು ತಾಲೂಕಿನಿಂದ ಬಂದಿದ್ದ ಇಬ್ಬರು ಯುವಕರು ರಕ್ಷಿಸಲ್ಪಟ್ಟಿದ್ದಾರೆ.
ಇಂದು ಬೆಳಗ್ಗೆ ಯುವಕರ ತಂಡ ಆಟವಾಡಲು ಸಮುದ್ರಕ್ಕಿಳಿದಿದ್ದು, ಇಬ್ಬರು ಯುವಕರು ಸಮುದ್ರದ ಅಲೆಗೆ ಸಿಲುಕಿ ಒದ್ದಾಡುತ್ತಿದ್ದರು ಎನ್ನಲಾಗಿದೆ. ಯುವಕರು ಸಮುದ್ರದಲ್ಲಿ ಸಿಲುಕಿಕೊಂಡಿರುವುದನ್ನು ತಕ್ಷಣ ಗಮನಿಸಿದ ಜೀವ ರಕ್ಷಕ ಸಿಬ್ಬಂದಿ ಗೋಪಿನಾಥ್ (25) ಮತ್ತು ರಂಗನಾಥ್ (26) ಎಂಬ ಇಬ್ಬರು ಯುವಕರನ್ನು ರಕ್ಷಣೆ ಮಾಡಿದ್ದಾರೆ
- Advertisement -