ಮೂಡಬಿದರೆ; ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದಾರೆಂದು ಇಬ್ಬರ ಮೇಲೆ ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ಮೂಡಬಿದರೆ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳುವಾಯಿಯಲ್ಲಿ ನಡೆದಿದೆ.
ಮೂಡುಬಿದಿರೆ ಮೂಲದ ಅಬ್ದುಲ್ ರಹಿಮಾನ್ ಮತ್ತು ಕೂಸಪ್ಪ ಪೂಜಾರಿ ಗಂಭೀರವಾಗಿ ಹಲ್ಲೆಗೀಡಾದವರು ಅವರನ್ನು ಮೂಡಬಿದಿರೆ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಬ್ದುಲ್ ರಹಿಮಾನ್ ಮತ್ತು ಕೂಸಪ್ಪ ಅವರು ಹೈಬ್ರೀಡ್ ಹಸುವನ್ನು ಕೃತಕ ಗರ್ಭಧಾರಣೆಗೆಂದು ವಾಹನವೊಂದರಲ್ಲಿ ಕಾರ್ಕಳದ ತಮ್ಮ ಪರಿಚಯದವರ ಮನೆಯಿಂದ ಮೂಡುಬಿದಿರೆಗೆ ತರುವಾಗ ಬೆಳುವಾಯಿ ಎಂಬಲ್ಲಿ ವಾಹನಕ್ಕೆ ಅಡ್ಡಗಟ್ಟಿದ ಬಜರಂಗದಳದ ಕಾರ್ಯಕರ್ತರು ಗಂಭೀರ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಕಾನೂನು ಪ್ರಕಾರ ದಾಖಲೆ ಪತ್ರಗಳನ್ನು ಇಟ್ಟುಕೊಂಡು ಹಸು ಸಾಗಾಟ ಮಾಡುತ್ತಿರುವುದಾಗಿ ಹೇಳಿದರೂ, ಹಬ್ಬಕ್ಕೆ ಕಡಿಯಲು ಕೊಂಡುಹೋಗುತ್ತಿರುವುದಾಗಿ ಹೇಳಿ ಬಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಸಂತ್ರಸ್ತರು ದೂರಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತರು ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.