- Advertisement -
- Advertisement -
ಉಡುಪಿ: ಮನೆಯ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವಾಗಿರುವ ಘಟನೆ ಪುತ್ತೂರಿನ ನಿಟ್ಟೂರಿನಲ್ಲಿ ನಡೆದಿದೆ. ಸಂತೋಷ್ ಅವರು ತಮ್ಮ ಸ್ಕೂಟರ್ ನ್ನು ಮನೆಯ ಮುಂದೆ ನಿಲ್ಲಿಸಿದ್ದರು.
ತಡರಾತ್ರಿ 1.20 ರ ಸುಮಾರಿಗೆ ಎದ್ದು ನೋಡಿದಾಗ ತಮ್ಮ ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟರ್ ಇಲ್ಲದೆ ಇರುವುದು ಗಮನಕ್ಕೆ ಬಂದಿದೆ ಈ ವೇಳೆ ಸ್ಕೂಟರ್ ನ್ನು ಎಲ್ಲಾ ಕಡೆ ಹುಡುಕಾಡಿದರೂ ಎಲ್ಲೂ ಪತ್ತೆಯಾಗಲಿಲ್ಲ . ಈ ಬಗ್ಗೆ ಸಂತೊಷ ಬಿ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ.
ಕಳವಾದ ಸ್ಕೂಟರ್ ಮೌಲ್ಯ 30,000 ರೂ.ಎಂಬುದಾಗಿ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
- Advertisement -