- Advertisement -
- Advertisement -
ಸುಳ್ಯ: ನದಿಯಲ್ಲಿ ಮುಳುಗಿ ಯುವಕರಿಬ್ಬರು ಸಾವನ್ನಪ್ಪಿದ ಘಟನೆ ಸುಳ್ಯದ ದೊಡ್ಡೇರಿಯಲ್ಲಿ ನಡೆದಿದೆ. ಈಶ್ವರಮಂಗಲದ ಯುವಕರಿಬ್ಬರು ದೊಡ್ಡೇರಿಯಲ್ಲಿ ಇರುವ ಗೆಳೆಯರೊಬ್ಬರ ಮನೆಗೆ ಬಂದಿದ್ದರು. ಈ ವೇಳೆ ಮನೆ ಪಕ್ಕದ ಪಯಸ್ವಿನಿ ನದಿಗೆ ಈಜಾಡಲು ತೆರಳಿದ್ದಾರೆ. ಈಜಾಡುತ್ತಿದ್ದ ವೇಳೆ ಓರ್ವ ಯುವಕ ನೀರು ಪಾಲಾಗಿದ್ದಾನೆ. ಆತನನ್ನು ರಕ್ಷಿಸಲು ಹೋದ ಮತ್ತೋರ್ವನೂ ನೀರು ಪಾಲಾಗಿದ್ದಾನೆ ಎನ್ನಲಾಗಿದೆ.
ಸ್ಥಳೀಯರು ಅವರನ್ನು ರಕ್ಷಿಸುವ ಪ್ರಯತ್ನ ಮಾಡಿದರಾದರೂ ಆ ವೇಳೆಗೆ ಅವರು ಕೊನೆಯುಸಿರೆಳೆದಿದ್ದರು. ಮೃತದೇಹಗಳನ್ನು ಸರಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ತರಲಾಗಿದೆ.
- Advertisement -