Saturday, June 28, 2025
Homeಕರಾವಳಿಉಡುಪಿಉದ್ಯಾವರ: ಹಿರಿಯ ಕಾಂಗ್ರೆಸ್ ಮುಂದಾಳು ಯು.ಆನಂದ ಮೆಂಡನ್ ನಿಧನ

ಉದ್ಯಾವರ: ಹಿರಿಯ ಕಾಂಗ್ರೆಸ್ ಮುಂದಾಳು ಯು.ಆನಂದ ಮೆಂಡನ್ ನಿಧನ

spot_img
- Advertisement -
- Advertisement -

ಉಡುಪಿ, ಮೇ 11: ಮೊಗವೀರ ಸಮಾಜದ ನಾಯಕ, ಮತ್ಸ್ಯೋದ್ಯಮಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಯು.ಆನಂದ ಮೆಂಡನ್ (92) ಉದ್ಯಾವರ ಪಿತ್ರೋಡಿಯ ಸ್ವಗೃಹದಲ್ಲಿ ನಿಧನಾದರು.

ಮೃತರು ಉಚ್ಚಿಲದ ದ.ಕ. ಮೊಗವೀರ ಮಹಾಜನ ಸಂಘದ ಮಾಜಿ ಅಧ್ಯಕ್ಷ, ಹದಿನಾಲ್ಕು ಪಟ್ಣ ಮೊಗವೀರ ಮಹಾಜನ ಸಂಘದ ಮಾಜಿ ಅಧ್ಯಕ್ಷ, ಭೂನ್ಯಾಯ ಮಂಡಳಿಯ ಸದಸ್ಯ, ಉದ್ಯಾವರ ಗ್ರಾಪಂ ಮಾಜಿ ಸದಸ್ಯರು, ಮೀನುಗಾರಿಕಾ ಮತ್ತು ಮೀನು ಉತ್ಪನ್ನಗಳ ಸಹಕಾರಿ ಸಂಘ ಪಿತ್ರೋಡಿ ಮಾಜಿ ಅಧ್ಯಕ್ಷರು, ಉದ್ಯಾವರ ಸದಿಯ ಸಾಹುಕಾರ ಹಿರಿಯ ಪ್ರಾಥಮಿಕ ಶಾಲೆಯ ಸಂಚಾಲಕರಾಗಿ ಶೈಕ್ಷಣಿಕ ಹಾಗೂ ಸಾಮಾಜಿಕ ನಾಯಕರಾಗಿ ಗುರುತಿಸಿ ಕೊಂಡಿದ್ದರು.

ಮಲ್ಪೆ ಮಧ್ವರಾಜ್, ಮಾಜಿ ಸಚಿವೆ ಮನೋರಮಾ ಮಧ್ವರಾಜ್, ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್‌ರಿಗೆ ನಿಕಟವರ್ತಿ ಯಾಗಿದ್ದರು. ಮೃತರು ಪತ್ನಿ, ಐವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಶಾಸಕ ಲಾಲಾಜಿ ಆರ್. ಮೆಂಡನ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉದ್ಯಾವರ ಗ್ರಾಪಂ ಅಧ್ಯಕ್ಷೆ ಸುಗಂಧಿ ಶೇಖರ್ ಮೊದಲಾದ ಗಣ್ಯರು ಮೃತರ ದರ್ಶನ ಪಡೆದು ಸಂತಾಪ ಸೂಚಿಸಿದ್ದಾರೆ.

ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕಾಂಗ್ರೆಸ್ ಮುಖಂಡರಾದ ಎಂ.ಎ. ಗಫೂರ್, ಬಿ.ನರಸಿಂಹ ಮೂರ್ತಿ, ದಿನೇಶ್ ಪುತ್ರನ್, ಹರೀಶ್ ಕಿಣಿ, ದಿವಾಕರ ಕುಂದರ್, ಭಾಸ್ಕರ್ ರಾವ್ ಕಿದಿಯೂರು, ಉದ್ಯಾವರ ನಾಗೇಶ್ ಕುಮಾರ್, ಪ್ರಖ್ಯಾತ್ ಶೆಟ್ಟಿ, ಮಹಾಬಲ ಕುಂದರ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಬಿ. ರಮಾನಂದ ಮೂರ್ತಿ, ಕೀರ್ತಿ ಶೆಟ್ಟಿ ಸಂತಾಪ ಸೂಚಿಸಿದ್ದಾರೆ.

- Advertisement -
spot_img

Latest News

error: Content is protected !!