ಮಂಗಳೂರು: ಎಲ್ಲಿಯವರೆಗೆ ನಮಗೆ ಅವರು ತೊಂದರೆ ಕೊಡುತ್ತಾರೋ, ಅಲ್ಲಿಯವರೆಗೆ ಪಾಕಿಸ್ತಾನದೊಂದಿಗೆ ಭಾರತ ಕ್ರಿಕೆಟ್ ಆಟವಾಡಬಾರದು ಎಂದು ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಹೇಳಿದ್ದಾರೆ.
ಅಮೇರಿಕಾದಲ್ಲಿ ಟಿ20 ವರ್ಲ್ ಕಪ್ ನಲ್ಲಿ ಭಾರತ ಪಾಕಿಸ್ತಾನ ಕ್ರಿಕೆಟ್ ಮ್ಯಾಚ್ ಕುರಿತಂತೆ ಮಾತನಾಡಿದ ಅವರು ಪಾಕಿಸ್ತಾನ ಎಲ್ಲಿಯವರೆಗೆ ಅವರು ತೊಂದರೆ ಕೊಡುತ್ತದೋ, ಅಲ್ಲಿಯವರೆಗೆ ನಾವು ಅವರೊಂದಿಗೆ ಕ್ರಿಕೆಟ್ ಆಟವಾಡಬಾರದು ಎಂದು ಹೇಳಿದ್ದಾರೆ.
ಜೂ. 9ರಂದು ನ್ಯೂಯಾರ್ಕ್ನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ಪಂದ್ಯಾವಳಿಯ ಭಾರತ-ಪಾಕ್ ಮ್ಯಾಚ್ ಬಗ್ಗೆ ಮಾತನಾಡಿದ ಅವರು, ಹಿಂದೆ ಪಾಕಿಸ್ತಾನದವರು ಕ್ರಿಕೆಟ್ ಆಟವಾಡಲು ಬಂದ ವೇಳೆ ನಮ್ಮಲ್ಲಿ ಪಿಚ್ ಅಗೆದಿದ್ದಾರೆ.ಎಲ್ಲಿಯವರೆಗೆ ಅವರು ನಮಗೆ ತೊಂದರೆ ಕೊಡುತ್ತಾರೋ ಅಲ್ಲಿಯವರೆಗೆ ಅವರೊಂದಿಗೆ ಆಟವಾಡಬಾರದು ಎಂದಿದ್ದಾರೆ.
ಎರಡೂ ದೇಶಗಳ ನಡುವೆ ಸಂಚಾರ ಮಾಡುವುದನ್ನೂ ನಿಲ್ಲಿಸಲಾಗಿದೆ. ಅಲ್ಲದೆ ಅವರು ನಮ್ಮಲ್ಲಿಗೆ ಬಂದು ಆಡುವುದನ್ನೂ ನಿಲ್ಲಿಸಲಾಗಿದೆ. ಇಷ್ಟಾದ ಮೇಲೆ ಪಾಕಿಸ್ಥಾನದ ಆಟಗಾರರನ್ನು ದುಬಾೖ, ನ್ಯೂಯಾರ್ಕ್ಗೆ ಕರೆದೊಯ್ದು ಅಲ್ಲಿ ಅವ ರೊಂದಿಗೆ ಭಾರತದ ಆಟಗಾರರು ಆಡುವುದು ಯಾಕೆ? ಅವರೊಂದಿಗೆ ಆಡದಿದ್ದರೆ ಏನಾಗುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ.
ನಾನೂ ಕ್ರಿಕೆಟ್ ಅಭಿಮಾನಿ, ಆಟಗಾರನೂ ಹೌದು. ಏನೇ ನಾಳೆ ನಡೆಯುವ ಪಾಕ್ ಜತೆಗಿನ ಪಂದ್ಯದಲ್ಲಿ ಭಾರತದ ತಂಡ ಗೆಲುವು ಸಾಧಿಸುವುದು ಮಾತ್ರವಲ್ಲ, ಇಡೀ ದೇಶಕ್ಕೆ ಗೌರವದ ಗೆಲುವನ್ನು ತರಬೇಕು ಎಂದು ಹಾರೈಸುವುದಾಗಿಯೂ ತಿಳಿಸಿದ್ದಾರೆ.