Friday, May 3, 2024
Homeಕರಾವಳಿಮಂಗಳೂರು; ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋದರೆ ಅದರಲ್ಲಿ ತಪ್ಪಿಲ್ಲ; ವಿಧಾನಸಭೆ ಸ್ಪೀಕರ್ ಯು ಟಿ ಖಾದರ್...

ಮಂಗಳೂರು; ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋದರೆ ಅದರಲ್ಲಿ ತಪ್ಪಿಲ್ಲ; ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಹೇಳಿಕೆ

spot_img
- Advertisement -
- Advertisement -

ಮಂಗಳೂರು; ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋದರೆ ಅದರಲ್ಲಿ ತಪ್ಪಿಲ್ಲ ಎಂದು ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರು ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು  ಅಯೋಧ್ಯೆಯ ಭವ್ಯವಾದ ರಾಮಮಂದಿರದಿಂದ ನಮ್ಮ ದೇಶಕ್ಕೆ ಕೀರ್ತಿ ಬರುವ ವಿಚಾರ ಆಗಲಿ ಮತ್ತು ನಮ್ಮ ಸಮಾಜದ ಪ್ರತಿ ಗ್ರಾಮದಲ್ಲೂ ಸೌಹಾರ್ದತೆ, ಸೋದರತೆ, ಪ್ರೀತಿ ವಿಶ್ವಾಸ ನೆಲೆಗೊಳ್ಳಲು ಇದೊಂದು ಪ್ರೇರಣೆಯಾಗುವ ಕಾರ್ಯಕ್ರಮ ಆಗಲಿ. ಈ ಕಾರ್ಯಕ್ರಮಕ್ಕೆ ಸಂತೋಷದಿಂದ ನಾನು ಶುಭಾಶಯ ಸಲ್ಲಿಸ್ತೇನೆ ಎಂದಿದ್ದಾರೆ.

ಇನ್ನು ಆಹ್ವಾನ ಬಂದ್ರೆ ಉದ್ಘಾಟನೆಗೆ ಹೋಗ್ತೀರಾ ಅನ್ನೊ‌ ಪ್ರಶ್ನೆಗೆ ಸಮಯಾವಕಾಶ, ಅವಕಾಶ ಸಿಕ್ಕಿದಂತಹ ಸಂದರ್ಭದಲ್ಲಿ ಎಲ್ಲರೂ ಕೂಡ ಹೋಗಬಹುದು, ಉದ್ಘಾಟನೆಗೆ ಹೋದರೆ ಅದರಲ್ಲಿ ತಪ್ಪಿಲ್ಲ ಎಂದ ಖಾದರ್ ನಮ್ಮ ಸಮಾಜ ಹಾಗೂ ದೇಶವನ್ನು ಒಗ್ಗಟ್ಟು ಮಾಡುವ ಸಮಾರಂಭ ಆಗಬೇಕು ಅಂತಾ ನಾನು ಹೇಳ ಬಯಸುತ್ತೇನೆ ಎನ್ನುವ ಮೂಲಕ ಸೌಹಾರ್ದತೆಯ ಸಂದೇಶ ಸಾರಿದ್ದಾರೆ.

- Advertisement -
spot_img

Latest News

error: Content is protected !!