ಮಂಗಳೂರು; ನೂತನ ಸ್ಪೀಕರ್ ಯು ಟಿ ಖಾದರ್ ಅವರು ಹಿರಿಯ ಕಾಂಗ್ರೆಸ್ ನಾಯಕ ಬಿ.ಜನಾರ್ದನ ಪೂಜಾರಿ ಅವರ ಬಂಟ್ವಾಳದ ಬಸ್ತಿಪಡ್ಪುವಿನಲ್ಲಿರುವ ಮನೆಗೆ ಭೇಟಿ ನೀಡಿ ನೀಡಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಪೂಜಾರಿ ಅವರು ಕರ್ನಾಟಕದಲ್ಲಿ ಖಾದರ್ ಅವರಿಗೆ ಸರಿಸಾಟಿ ಯಾರು ಇಲ್ಲ.ತಂದೆಯನ್ನು ಮೀರಿಸಿದ ಖಾದರ್ ಎಂದು ಹಾಡಿ ಹೊಗಳಿದರು. ಉತ್ತಮವಾಗಿ ಮಾತನಾಡಿದ ಇವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಸ್ಪೀಕರ್ ಅವರ ಸಂಪೂರ್ಣ ಮಾತುಗಳನ್ನು ಟಿ.ವಿ.ಮೂಲಕ ವೀಕ್ಷಣೆ ಮಾಡಿದ್ದೇನೆ ಎಂದು ತಿಳಿಸಿದರು.
ಬಳಿಕ ಮಾತನಾಡಿದ ಯು.ಟಿ.ಖಾದರ್ ಅವರು ಸಂವಿಧಾನದ ಬದ್ದವಾದ ಜವಬ್ದಾರಿಯ ಗೌರವ ಉಳಿಸುವ ಕಾರ್ಯ ಮಾಡುತ್ತೇನೆ.ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಹಿರಿಯ ಶಾಸಕರ,ಶಾಸಕರುಗಳು ಹಾಗೂ ಪ್ರತಿಪಕ್ಷದವರ ಕಾರ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದು ಭರವಸೆ ನೀಡಿದರು.ಜನಾರ್ದನ ಪೂಜಾರಿ ಹಾಗೂ ಹಿರಿಯರ ಸಲಹೆ ಸೂಚನೆಗಳನ್ನು ಪಾಲಿಸಿಕೊಂಡು, ಹಿರಿಯರಾದ ವೈಕುಂಠ ಬಾಳಿಗಾ ಮತ್ತು ಕೆ.ಎಸ್.ಹೆಗ್ಡೆ ಅವರು ಹಾಕಿಕೊಟ್ಟ ಮೇಲ್ಪಂಕ್ತಿಯನ್ನು ಅನುಸರಿಸಿಕೊಂಡು ಜಿಲ್ಲೆಯ ಹಾಗೂ ಕ್ಷೇತ್ರದ ಮತದಾರರ ಗೌರವವನ್ನು ಉಳಿಸುವ ಕೆಲಸ ಮಾಡುತ್ತೇನೆ ಎಂದು ಅವರು ಎಂದರು.