Saturday, June 28, 2025
Homeತಾಜಾ ಸುದ್ದಿಜಾನಪದ ಕ್ಷೇತ್ರದಲ್ಲಿ ಸಾಧನೆಗೈದ ಉದಯ ಕುಮಾರ್ ಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ

ಜಾನಪದ ಕ್ಷೇತ್ರದಲ್ಲಿ ಸಾಧನೆಗೈದ ಉದಯ ಕುಮಾರ್ ಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ

spot_img
- Advertisement -
- Advertisement -

ಬೆಳ್ತಂಗಡಿ: ಆರ್ಯಭಟ ಸಾಂಸ್ಕೃತಿಕ ಸಂಸ್ಥೆ ಆಯೋಜಿಸಿದ 47 ನೇ ವಾರ್ಷಿಕ ಆರ್ಯಭಟ ಅಂತರ ರಾಷ್ಟ್ರೀಯ ಪ್ರಶಸ್ತಿಗೆ ಜಾನಪದ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಬೆಳ್ತಂಗಡಿ ತಾಲೂಕಿನ ಹೆಮ್ಮೆಯ ಪ್ರತಿಭೆ ಉದಯ ಕುಮಾರ್ ಲಾಯಿಲ ಇವರು ಆಯ್ಕೆಯಾಗಿದ್ದು ಪ್ರಶಸ್ತಿ ಪ್ರದಾನ ಸಮಾರಂಭವು ಮೇ 25 ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಿತು.

ಕರ್ನಾಟಕ ಉಚ್ಛನ್ಯಾಯಾಲಯದ ವಿಶ್ರಾಂತ ನ್ಯಾಯಾಮೂರ್ತಿಗಳಾದ ಅರಳಿ ನಾಗರಾಜ್ ಉದ್ಘಾಟನೆ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ನಾಡೋಜ ಮಹೇಶ್ ಜೋಶಿ ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ತು, ಹಿರಿಯ ಚಲನ ಚಿತ್ರ ನಟಿ ಪದ್ಮಶ್ರೀ ಪುರಸ್ಕೃತ ಶ್ರೀಮತಿ ಭಾರತಿ ವಿಷ್ಣುವರ್ಧನ್, ಹಾಗೂ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷ ಡಾ. ಎಚ್. ಎಲ್.ಎನ್. ರಾವ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಜಾನಪದ ಕ್ಷೇತ್ರದಲ್ಲಿ ಕಳೆದ ಹದಿನೇಳು ವರ್ಷಗಳಿಂದ ತಾಲೂಕು, ಜಿಲ್ಲೆ ಮತ್ತು ರಾಜ್ಯಮಟ್ಟದ ವಿವಿಧ ಕಾರ್ಯಕ್ರಮಗಳಲ್ಲಿ ಕಲಾ ನಿರ್ದೇಶಕರಾಗಿ, ಸಂಘಟಕರಾಗಿ, ಕಲಾವಿದರಾಗಿ ಮಾತ್ರವಲ್ಲದೆ ರಾಜ್ಯ ಮಟ್ಟದ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೀರ್ಪುಗಾರರಾಗಿ ಸೇವೆ ಸಲ್ಲಿಸಿರುವ ಬಹುಮುಖ ಪ್ರತಿಭೆ ಲಾಯಿಲ ಗ್ರಾಮದ ಪುತ್ರಬೈಲು ನಿವಾಸಿ ಉದಯ್ ಕುಮಾರ್ ಲಾಯಿಲ ಇವರ ಸಾಧನೆಗೆ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆಯಾಗಿದ್ದು ಈ ಮೂಲಕ ಜಾನಪದ ಕ್ಷೇತ್ರದಲ್ಲಿ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ತಾಲೂಕಿಗೆ ಪ್ರಥಮವಾಗಿ ಇವರಿಗೆ ದೊರೆತಿದೆ.


ಇವರು ಮೂಲ ಜಾನಪದ ಕಲೆಯ ವಿವಿಧ ಪ್ರಕಾರಗಳನ್ನು ತಾಲೂಕು ಹಾಗೂ ಜಿಲ್ಲೆಗೆ ಪರಿಚಯಿಸಿದವರು. ಹಾಡು, ನೃತ್ಯ, ಜನಪದ ಕಮ್ಮಟ, ಬೀದಿನಾಟಕ, ಜನಜಾಗೃತಿ ಕಾರ್ಯಕ್ರಮ, ಮಕ್ಕಳ ಬೇಸಿಗೆ ಶಿಬಿರದ ಆಯೋಜನೆ, ತುಳುನಾಡ ವೈಭವ ಕಾರ್ಯಕ್ರಮ ಮೊದಲಾದವುಗಳ ಜೊತೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕೃತ ಜನಪದ ಕಲಾವಿದರಾಗಿರುವ ಇವರು ದ.ಕ ಜಿಲ್ಲಾ ಕನ್ನಡ ಜಾನಪದ ಪರಿಷತ್ ಸಂಘಟನಾ ಕಾರ್ಯದರ್ಶಿಯಾಗಿದ್ದಾರೆ.


ರಾಷ್ಟ್ರೀಯ ಸಂಸ್ಕೃತಿ ವಿನಿಮಯ ಕಾರ್ಯಕ್ರಮಗಳನ್ನು ಹೊರ ರಾಜ್ಯಗಳಲ್ಲಿ ಹಮ್ಮಿಕೊಂಡ ಹೆಮ್ಮೆ ಇವರದ್ದು. ಆಕಾಶವಾಣಿ, ಚಂದನ, ದೂರದರ್ಶನ ಕಾರ್ಯಕ್ರಮಗಳನ್ನು ನೀಡಿರುವ ಇವರಿಗೆ ಮೈಸೂರು ಕಲಾ ಸೌರಭ ಗೌರವ ಪ್ರಶಸ್ತಿಯೊಂದಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಿಸಲ್ಪಟ್ಟಿದ್ದಾರೆ.

- Advertisement -
spot_img

Latest News

error: Content is protected !!