ಉಡುಪಿ: ಕಳೆದ ಕೆಲವು ದಿನಗಳಲ್ಲಿ ಸೋಂಕಿತರ ಸಂಖ್ಯೆ ಕುಸಿತ ಕಂಡಿದ್ದ ಕೃಷ್ಣ ನಗರಿ ಉಡುಪಿಯಲ್ಲಿ ಇಂದು 40 ಜನರಿಗೆ ಸೋಂಕು ದೃಢವಾಗಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ.
ಇಂದಿನ 40 ಹೊಸ ಸೋಂಕಿತರ ಕಾರಣದಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1179ಕ್ಕೆ ಏರಿಕೆಯಾಗಿದೆ. ಇವರಲ್ಲಿ 1051 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಬ್ಬರು ಮೃತಪಟ್ಟಿದ್ದು, ಸದ್ಯ ಜಿಲ್ಲೆಯಲ್ಲಿ 126 ಸಕ್ರಿಯ ಪ್ರಕರಣಗಳಿವೆ. ಇವರೆಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯ ಹೆಬ್ರಿ ಸಮುದಾಯದ ಆರೋಗ್ಯ ಕೇಂದ್ರದ ವೈದ್ಯರು, ಸಿಬ್ಬಂದಿಗೆ ಸೋಂಕು ತಗುಲಿದೆ. ಹಿನ್ನಲೆಯಲ್ಲಿ ಸಮುದಾಯ ಕೇಂದ್ರವನ್ನು ಸೀಲ್ ಡೌನ್ ಮಾಡಲಾಗಿದೆ. ಟ್ರಾವೆಲ್ ಹಿಸ್ಟರಿ ಮುಚ್ಚಿಟ್ಟಿದ್ದ ಇಬ್ಬರು ಸೋದರರಿಂದ ನಾಲ್ವರಿಗೆ ಕೊರೋನಾ ಪಾಸಿಟಿವ್ ಬಂದಿದೆ ಎನ್ನಲಾಗಿದೆ.
ಮಂಗಳೂರಿಗೆ ತೆರಳಿ ಟ್ರಾವೆಲ್ ಹಿಸ್ಟರಿ ತಿಳಿಸದವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಕೇರಳದಿಂದ ಆಗಮಿಸಿದ್ದ ವ್ಯಕ್ತಿಯಿಂದ 10 ಜನರಿಗೆ ಸೋಂಕು ತಗಲಿದೆ.
ಅದೇ ರೀತಿ. ಮಹಾರಾಷ್ಟ್ರ, ಬೆಂಗಳೂರು, ಬಾಗಲಕೋಟೆಯಿಂದ ಬಂದಿದ್ದ ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ ಎಂದು ಹೇಳಲಾಗಿದೆ.