Friday, May 3, 2024
Homeಕರಾವಳಿಉಡುಪಿಉಡುಪಿ: ರಿವರ್ಸ್ ತೆಗೆಯುವಾಗ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರ್

ಉಡುಪಿ: ರಿವರ್ಸ್ ತೆಗೆಯುವಾಗ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರ್

spot_img
- Advertisement -
- Advertisement -

ಬ್ರಹ್ಮಾವರ: ಕಾರನ್ನು ರಿವರ್ಸ್ ತೆಗೆಯುವಾಗ ಚಾಲಕಿಯ ನಿಯಂತ್ರಣ ತಪ್ಪಿ ಬಾವಿಗೆ ಉರುಳಿ ಬಿದ್ದ ಘಟನೆ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಪಟ್ಟಣ ವ್ಯಾಪ್ತಿಯಲ್ಲಿ ನಡೆದಿದೆ.

ಕಾರನ್ನು ಖ್ಯಾತ ‘ಶ್ರೀಕೃಷ್ಣ’ ಪಂಚಾಂಗದ ಕರ್ತೃ ಶ್ರೀನಿವಾಸ ಅಡಿಗರ ಸೊಸೆ ಚಲಾಯಿಸುತ್ತಿದ್ದು, ಕಾರು ರಿವರ್ಸ್ ತೆಗೆಯುವಾಗ ಬ್ರೇಕ್ ಬದಲು ಎಕ್ಸಲೇಟರ್ ಗೆ ತುಳಿದ ಕಾರಣ ಕಾರು ನಿಯಂತ್ರಣ ತಪ್ಪಿ ಮನೆಯ ಬಾವಿಗೆ ಬಿದ್ದಿದೆ.

ಕಾರು ನಿಯಂತ್ರಣ ಕಳೆದುಕೊಂಡದ್ದು ತಮ್ಮ ಗಮನಕ್ಕೆ ಬರುತ್ತಿದ್ದ ಕೂಡಲೇ ಅಡಿಗರ ಸೊಸೆ ಕಾರಿನಿಂದ ಹಾರಿ ಅಪಾಯದಿಂದ ಪಾರಾಗಿದ್ದಾರೆ. ಕಾರನ್ನು ಸ್ಥಳೀಯರ ಮತ್ತು ಕ್ರೇನ್ ನ ಸಹಾಯದಿಂದ ಮೇಲಕ್ಕೆ ಎತ್ತಲಾಗಿದೆ.

- Advertisement -
spot_img

Latest News

error: Content is protected !!