Friday, June 27, 2025
HomeWorldಉಡುಪಿ ಜಿಲ್ಲಾ ನಾಗರಿಕ ಸಮಿತಿಯಿಂದ 'ಆಪರೇಷನ್ ಸಿಂಧೂರ್' ಸಂಭ್ರಮಾಚರಣೆ; ರಾಷ್ಟ್ರಧ್ವಜದೊಂದಿಗೆ ನಗರದಲ್ಲಿ ಮೆರವಣಿಗೆ

ಉಡುಪಿ ಜಿಲ್ಲಾ ನಾಗರಿಕ ಸಮಿತಿಯಿಂದ ‘ಆಪರೇಷನ್ ಸಿಂಧೂರ್’ ಸಂಭ್ರಮಾಚರಣೆ; ರಾಷ್ಟ್ರಧ್ವಜದೊಂದಿಗೆ ನಗರದಲ್ಲಿ ಮೆರವಣಿಗೆ

spot_img
- Advertisement -
- Advertisement -

ಉಡುಪಿ: ಜಮ್ಮು ಮತ್ತು ಕಾಶ್ಮೀಲರದ ಪಹಲ್ಗಾಮ್ ನಲ್ಲಿ ನಡೆದಿದ್ದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಮಧ್ಯರಾತ್ರಿ ಭಾರತ ಸೇನೆ ‘ಆಪರೇಷನ್ ಸಿಂಧೂರ್‘ ಕಾರ್ಯಾಚರಣೆ ನಡೆಸಿದ್ದು, ಉಡುಪಿ ಜಿಲ್ಲಾ ನಾಗರಿಕ ಸಮಿತಿಯು ಈ ಕಾರ್ಯಾಚರಣೆಯನ್ನ ಶ್ಲಾಘಿಸಿ ಮೇ 7 ರಂದು 21×14 ಅಡಿಯ ರಾಷ್ಟ್ರಧ್ವಜದೊಂದಿಗೆ ಮೆರವಣಿಗೆಯನ್ನು ಆಯೋಜಿಸುವ ಮೂಲಕ ಸಂಭ್ರಮಿಸಿತು.

ಚಿತ್ತರಂಜನ್ ವೃತ್ತದಿಂದ ಈ ಮೆರವಣಿಗೆಯು ಪ್ರಾರಂಭವಾಗಿ ಮಾರುತಿ ವೀಥಿಕಾ ವೃತ್ತದವರೆಗೆ ಸಾಗಿತು. ನಂತರ ಮತ್ತೆ ಮೆರವಣಿಗೆ ಪ್ರಾರಂಭದ ಸ್ಥಳಕ್ಕೆ ಹಿಂದಿರುಗಿತು.

ಸಂಭ್ರಮಾಚರಣೆಯ ಅಂಗವಾಗಿ, ಸಮಿತಿಯು ಮೆರವಣಿಗೆಯ ಮಾರ್ಗದಲ್ಲಿ ಸಾರ್ವಜನಿಕರಿಗೆ ಸಿಹಿ ಹಂಚಿತು.

ಇನ್ನು ಈ ಸಂದರ್ಭದಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಅಧ್ಯಕ್ಷರಾದ ನಿತ್ಯಾನಂದ ಒಳಕಾಡು, ‘ಈ ತ್ರಿವರ್ಣ ಧ್ವಜದ ಮೆರವಣಿಗೆಯೊಂದಿಗೆ ನಮ್ಮ ಭಾರತೀಯ ಸೇನೆಯನ್ನು ಗೌರವಿಸುವ ಮೂಲಕ ನಾವು ಸಂಭ್ರಮಾಚರಿಸುತ್ತಿದ್ದೇವೆ,’ ಎಂದರು.

ಮೆರವಣಿಗೆಯಲ್ಲಿ ಪಾಲ್ಗೊಂಡವರು ಧ್ವಜಕ್ಕೆ ಪುಷ್ಪಗಳನ್ನು ಅರ್ಪಿಸಿ, ದೇಶಭಕ್ತಿಯ ಘೋಷಣೆಗಳನ್ನು ಕೂಗಿದರು. ನಂತರದಲ್ಲಿ ಸಾರ್ವಜನಿಕರಿಗೆ ಸಿಹಿ ಹಂಚಲಾಯಿತು.

ಈ ಕಾರ್ಯಕ್ರಮದಲ್ಲಿ ಮಿತ್ರಾ ಸ್ಕೂಲ್ ಆಫ್ ನರ್ಸಿಂಗ್‌ನ ವಿದ್ಯಾರ್ಥಿಗಳು, ಕೋಟಕ್ ಮಹೀಂದ್ರಾ ಬ್ಯಾಂಕ್‌ನ ವಿನಾಯಕ್ ಹೆಗ್ಡೆ, ಸುಧಾಕರ್, ರಾಜೇಶ್ ಶೇಟ್, ತಾರಾನಾಥ್ ಮೇಸ್ತಾ ಮತ್ತಿತರರು ಸಕ್ರಿಯವಾಗಿ ಪಾಲ್ಗೊಂಡಿದ್ದರು.

- Advertisement -
spot_img

Latest News

error: Content is protected !!