Tuesday, May 14, 2024
Homeಕರಾವಳಿಉಡುಪಿಉಡುಪಿ ಶ್ರೀ ಕೃಷ್ಣನಿಗೆ ಸಮರ್ಪಣೆಗೊಂಡ "ಉಡುಪಿ ಕೇದಾರ ಕಜೆ "

ಉಡುಪಿ ಶ್ರೀ ಕೃಷ್ಣನಿಗೆ ಸಮರ್ಪಣೆಗೊಂಡ “ಉಡುಪಿ ಕೇದಾರ ಕಜೆ “

spot_img
- Advertisement -
- Advertisement -

ಕೇದಾರೊತ್ಥಾನ ಟ್ರಸ್ಟ್ ( ರಿ . ) ಉಡುಪಿ ಹಡಿಲು ಭೂಮಿ ಕೃಷಿಯಲ್ಲಿ ಉತ್ಪಾದಿಸಿದ ಸಾವಯವ ಕುಚ್ಚಲಕ್ಕಿ “ಉಡುಪಿ ಕೇದಾರ ಕಜೆ” ಹೆಸರಿನಲ್ಲಿ ಮಾರುಕಟ್ಟೆಗೆ ಬರಲಿದೆ.

ಆ ಪ್ರಯುಕ್ತ 100 ಕೆ.ಜಿ ಬೆಳ್ತಿಗೆ ಅಕ್ಕಿಯನ್ನಾಗಿ ಮಾಡಿ ಶ್ರೀಕೃಷ್ಣ ದೇವರಿಗೆ ಸಮರ್ಪಿಸಿ ಪರ್ಯಾಯ ಅದಮಾರು ಮಠದ ಶ್ರೀ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿಯವರಿಗೆ ಹಸ್ತಾಂತರಿಸಲಾಯಿತು.

ಕೇದಾರೋತ್ಥಾನ ಟ್ರಸ್ಟ್ ಅಧ್ಯಕ್ಷರು , ಶಾಸಕರಾದ ಶ್ರೀ ಕೆ . ರಘುಪತಿ ಭಟ್ ಅವರು ಉಡುಪಿ ಶ್ರೀಕೃಷ್ಣ ದೇವರಿಗೆ ಸಮರ್ಪಿಸಿ ಬಳಿಕ ಪರ್ಯಾಯ ಅದಮಾರು ಮಠದ ಶ್ರೀ ಶ್ರೀ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿಯವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸೋಲೂರು ಆರ್ಯ ಈಡಿಗ ಸಂಸ್ಥಾನದ ಶ್ರೀ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ, ಟ್ರಸ್ಟ್ ನ ಸದಸ್ಯರಾದ ಬಿರ್ತಿ ರಾಜೇಶ್ ಶೆಟ್ಟಿ , ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರೀಶ್ ಅಂಚನ್ ಪ್ರಮುಖರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!