- Advertisement -
- Advertisement -
ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಡಿಲು ಭೂಮಿ ಕೃಷಿ ಅಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಹಡಿಲು ಬಿದ್ದ ಗದ್ದೆಗಳಲ್ಲಿ ಸಾವಯವ ಕೃಷಿ ಮಾಡಲಾಗಿದ್ದು , ಈ ಆಂದೋಲನಕ್ಕೆ ಅನೇಕ ಗದ್ದೆಯ ಭೂಮಾಲಕರು ಸಹಕರಿಸಿದ್ದು ಇಂದು ಕಡೆಕಾರ್ ಗ್ರಾಮದ ಸುಮಾರು 103 ಭೂ ಮಾಲಕರಿಗೆ ಉಡುಪಿ ಕೇದಾರ ಕಜೆ ಅಕ್ಕಿಯನ್ನು ವಿತರಿಸಿ ಭೂ ಮಾಲಕರಿಗೆ ಅಭಿನಂದನೆ ಸಲ್ಲಿಸಲಾಯಿತು .
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ದಿನಕರ್ ಬಾಬು , ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್ , ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ , ಕಡೆಕಾರ್ ಗ್ರಾಮ ಪಂಚಾಯತ್ ಸದಸ್ಯರು , ಕಂಡದ ಜೊಕುಲು ತಂಡದ ಸದಸ್ಯರು ಹಾಗೂ ಸ್ಥಳೀಯ ಉಪಸ್ಥಿತರಿದ್ದರು .
- Advertisement -