Sunday, May 5, 2024
Homeಕರಾವಳಿಉಡುಪಿಉಡುಪಿ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿಗೆ ಸತತ 5ನೇ ಬಾರಿ ಪ್ರಶಸ್ತಿ !

ಉಡುಪಿ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿಗೆ ಸತತ 5ನೇ ಬಾರಿ ಪ್ರಶಸ್ತಿ !

spot_img
- Advertisement -
- Advertisement -

ಉಡುಪಿ : ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಉಡುಪಿ 2020-21ನೇ ಸಾಲಿನ ಸರ್ವತೋಮುಖ ಅಭಿವೃದ್ಧಿಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ನೀಡಲ್ಪಡುವ ಸಾಧನಾ ಪ್ರಶಸ್ತಿ ಸತತ 5 ನೇ ಬಾರಿಗೆ ಲಭಿಸಿದೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ರವರಿಂದ ಬ್ಯಾಂಕಿನ ಸಲಹೆಗಾರರಾದ ಶ್ರೀ ಆನಂದ ಎನ್ . ಪುತ್ರನ್ ಹಾಗೂ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಜಿ . ಕೆ . ಶೀನಾ ಪ್ರಶಸ್ತಿಯನ್ನು ಸ್ವೀಕರಿಸಿದರು.

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಶ್ರೀ ಯಶ್‌ಪಾಲ್ ಸುವರ್ಣರವರ ಅಧ್ಯಕ್ಷತೆಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಗಳ ಮೂಲಕ ವ್ಯವಹಾರ ನಡೆಸುತ್ತಿದ್ದು , ಕಳೆದ 12 ವರ್ಷಗಳಿಂದ ನಿರಂತರವಾಗಿ ಸದಸ್ಯರಿಗೆ 18 % ಡಿವಿಡೆಂಡ್ ನೀಡುವ ಮೂಲಕ ಕರಾವಳಿ ಭಾಗದ ಅತೀ ಹೆಚ್ಚು ಡಿವಿಡೆಂಡ್ ನೀಡುವ ಅಗ್ರಗಣ್ಯ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.

ಕೋವಿಡ್ ಸಂದಿಗ್ಧ ಸಂದರ್ಭದಲ್ಲಿಯೂ ಸರ್ವಾಂಗೀಣ ಪ್ರಗತಿ ಸಾಧಿಸಿದ್ದು ಬ್ಯಾಂಕಿನ ಕಾರ್ಯವೈಖರಿಗೆ ಈ ಬಾರಿಯ ಪ್ರತಿಷ್ಟಿತ ಸಾಧನಾ ಪ್ರಶಸ್ತಿಯ ಮೂಲಕ ಗೌರವಿಸಲಾಗಿದೆ.

- Advertisement -
spot_img

Latest News

error: Content is protected !!