- Advertisement -
- Advertisement -
ಉಡುಪಿ: ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿಯ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಸಿಎಂಗೆ ಶಾಸಕ ಯಶಪಾಲ್ ಸುವರ್ಣ ಮನವಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರಿಗೆ ಈ ಕುರಿತು ಉಡುಪಿ ಶಾಸಕ ಯಶಪಾಲ್ ಸುವರ್ಣ ಪತ್ರ ಬರೆದಿದ್ದಾರೆ.
ಕೋಟ್ಯಾಂತರ ಭಕ್ತರು ಸಂಭ್ರಮಾಚರಣೆ ಮಾಡಲು ನಿರ್ಧರಿಸಿದ್ದು, ಶ್ರೀರಾಮ ದೇವರ ಸೇವೆಯಲ್ಲಿ ಜನರು ಪಾಲ್ಗೊಳ್ಳಲು ಅವಕಾಶ ಸಿಗಬೇಕು ಎಂದು ಸುವರ್ಣ ಮನವಿ ಮಾಡಿದ್ದಾರೆ.
ಶಾಲೆ, ಕಾಲೇಜು, ಸರಕಾರಿ ಸಂಸ್ಥೆಗಳು, ಬ್ಯಾಂಕ್ ಮತ್ತಿತರ ಸಂಸ್ಥೆಗಳಿಗೆ ರಜೆ ನೀಡಿ ಎಂದು ಪತ್ರದ ಮೂಲಕ ಶಾಸಕ ಯಶ ಪಾಲ್ ಸುವರ್ಣ ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ.
- Advertisement -