Friday, May 3, 2024
Homeಕರಾವಳಿಉಡುಪಿಪೊಲೀಸರೇ ಬೆಚ್ಚಿ ಬಿದ್ರು ಉಡುಪಿಯ ಕೊಲೆ ಪ್ರಕರಣದ ಆರೋಪಿಯ ಹಿಸ್ಟರಿ ನೋಡಿ; ಪುಣೆಯಲ್ಲಿ ಪೊಲೀಸ್ ಆಗಿ...

ಪೊಲೀಸರೇ ಬೆಚ್ಚಿ ಬಿದ್ರು ಉಡುಪಿಯ ಕೊಲೆ ಪ್ರಕರಣದ ಆರೋಪಿಯ ಹಿಸ್ಟರಿ ನೋಡಿ; ಪುಣೆಯಲ್ಲಿ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸಿದ್ದ ಆರೋಪಿ

spot_img
- Advertisement -
- Advertisement -

ಡುಪಿ: ಇಲ್ಲಿನ ನೇಜಾರಿನ ತೃಪ್ತಿ ಲೇಔಟ್ ನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳವಾರ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಆರೋಪಿ ಪ್ರವೀಣ್ ಅರುಣ್ ಚೌಗಲೆ(39)ಯನ್ನು ಪೊಲೀಸರು ಬಂಧಿಸಿ, ಉಡುಪಿಗೆ ಕರೆ ತಂದಿದ್ದಾರೆ. ಇಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಆತನಿಗೆ ನವೆಂಬರ್ 28ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಇನ್ನು ಈತನ ವಿಚಾರಣೆ ವೇಳೆ ಪೊಲೀಸರಿಗೆ ಒಂದಷ್ಟು ಅಚ್ಚರಿಯ ಮಾಹಿತಿ ಲಭ್ಯವಾಗಿದೆ. ಆರೋಪಿ ಮಹಾರಾಷ್ಟ್ರದ ಪುಣೆಯಲ್ಲಿ ಮೂರು ತಿಂಗಳ ಕಾಲ ಪೊಲೀಸ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸಿದ್ದನು ಎಂಬ ಮಾಹಿತಿ ಲಭ್ಯವಾಗಿದೆ.ಮೂರು ತಿಂಗಳು ಮಹಾರಾಷ್ಟ್ರ ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸಿದ್ದ ಚೌಗಲೆ, ಮಂಗಳೂರಿನ ಏರ್ ಇಂಡಿಯಾ ಕಂಪೆನಿಯಲ್ಲಿ ಕೆಲಸ ಸಿಕ್ಕಿರುವ ಹಿನ್ನೆಲೆಯಲ್ಲಿ ಪೊಲೀಸ್ ವೃತ್ತಿಗೆ ರಾಜೀನಾಮೆ ನೀಡಿದ್ದನು. ಈತ ಮಂಗಳೂರಿನ ಏರ್ ಇಂಡಿಯಾದಲ್ಲಿ ಕ್ಯಾಬಿನ್ ಕ್ರ್ಯೂನಲ್ಲಿ ಕಳೆದ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದಾನೆ. ಈತನಿಗೆ ಏರ್ ಇಂಡಿಯಾದಲ್ಲಿ ಗಗನಸಖಿಯಾಗಿ ಸೇರಿದ್ದ ಐನಾಝ್ ಅವರ ಪರಿಚಯವಾಗಿತ್ತು ಎಂಬ ಮಾಹಿತಿ ಸಿಕ್ಕಿದೆ. ಇದಕ್ಕೆ ಪುಷ್ಠಿ ನೀಡುವಂತೆ ಮಾಧ್ಯಮದ ಜೊತೆ ಮಾತನಾಡಿದ ಎಸ್ಪಿ, ನಮ್ಮ ಮಾಹಿತಿ ಪ್ರಕಾರ ಆತ ಸಿ.ಐ.ಎಸ್.ಎಫ್. ಹಾಗೂ ಸಿ.ಆರ್.ಪಿಎಫ್.ನಲ್ಲಿ ಕರ್ತವ್ಯ ನಿರ್ವಹಿಸುತ್ತಿರಲಿಲ್ಲ. ಆತ ಸಿವಿಲ್ ಪೊಲೀಸ್ ನಲ್ಲಿ ಕೆಲಸ ಮಾಡುತ್ತಿದ್ದನು ಎಂಬ ಮಾಹಿತಿ ದೊರೆತಿದೆ. ಈ ಬಗ್ಗೆ ನಾವು ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!