ಉಡುಪಿ: ತಾನು ಹೋಮ್ ನರ್ಸ್ ಆಗಿದ್ದ ಮನೆಯಿಂದ ಚಿನ್ನಾಭರಣ ಕದ್ದ ಆರೋಪಿಯನ್ನು ಬಂಧಿಸುವಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಸಿದ್ದಪ್ಪ ಕೆ. ಕೊಡ್ಲಿ ಬಂಧಿತ ಆರೋಪಿ.
ದಿನಾಂಕ:17/11/2024 ರಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಸಾದ ಎಸ್. ಎಸ್ ಎಂಬವರು ದೂರು ದಾಖಲಿಸಿದ್ದರು. ಅವರ ಮನೆಯಲ್ಲಿ ಹೋಂ ನರ್ಸ ಆಗಿ ಕೆಲಸ ಮಾಡಿಕೊಂಡಿದ್ದ, ಸಿದ್ದಪ್ಪ ಕೆ. ಕೊಡ್ಲಿ ಎಂಬಾತನು ದಿನಾಂಕ: 17/11/24 ರಂದು ಬೆ: 09-15 ಗಂಟೆಯಿಂದ ಮ: 1-15 ಘಂಟೆಯ ಮದ್ಯಾವಧಿಯಲ್ಲಿ ಅವರ ಮನೆಯ ಹಾಲ್ ನ ಗಾಜಿನ ಬೀರುವಿನಲ್ಲಿ ಹಾಗೂ ಮಲಗುವ ಕೋಣೆಯಲ್ಲಿ ಇರಿಸಿದ್ದ ಗ್ರಾಡ್ರೇಜ್ ನ ಲಾಕರ್ ನಲ್ಲಿ ಇರಿಸಿದ್ದ ಸುಮಾರು 427 ಗ್ರಾಂ ತೂಕದ ರೂ: 31,17,100/- ಮೌಲ್ಯದ ಚಿನ್ನ ಹಾಗೂ ವಜ್ರಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದಾನೆ ಎಂದು ದೂರು ನೀಡಿದ್ದರು.

ಅದರಂತೆ ತಪ್ರಕರಣದ ತನಿಖೆಯನ್ನು ಪಿ.ಐ, ರಾಮಚಂದ್ರ ನಾಯಕ್ , ಉಡುಪಿ ನಗರ ಠಾಣೆರವರು ಕೈಗೊಂಡು ಆರೋಪಿ ಮತ್ತು ಸ್ವತ್ತು ತನಿಖೆಯನ್ನು ಪತ್ತೆಯ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣಾ ಪಿಎಸ್ಐ ಈರಣ್ಣ ಶಿರಗುಂಪಿ, ಪುನೀತ್, ಉಡುಪಿ ಸೆನ್ ಪೊಲೀಸ್ ಠಾಣೆ ಪಿ. ಎಸ್. ಐ ಪವನ್ ಕುಮಾರ್, ಉಡುಪಿ ನಗರ ಠಾಣೆಯ ಅಬ್ದುಲ್ ಬಶೀರ್, ಸಂತೋಷ, ಚೇತನ್ ಮತ್ತು ಸೆನ್ ಠಾಣೆಯ ಪ್ರವೀಣ ಕುಮಾರ್, ಪ್ರವೀಣ ರವರ ತಂಡ ದಿನಾಂಕ : 19/11/2024 ರಂದು ಆರೋಪಿ ಸಿದ್ದಪ್ಪ ಕೆ. ಕೊಡ್ಲಿ(23), ಕುಷ್ಟಗಿ ತಾಲ್ಲೂಕು, ಕೊಪ್ಪಳ ಇತನನ್ನು ದಸ್ತಗಿರಿಗೊಳಿಸಿ, ಕಳವು ಮಾಡಿ ಅಡಗಿಸಿಟ್ಟಿದ್ದ ಸ್ಥಳದಿಂದ ಅಂದಾಜು ರೂ: 30,00,000/- ಮೌಲ್ಯದ 374.45 ಗ್ರಾಮ್ಸ್ ತೂಕದ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳನ್ನು ಸ್ವಾಧೀನಪಡಿಸಲಾಗಿದೆ. ಆರೋಪಿಯನ್ನು ಕೋರ್ಟ್ ಗೆ ಹಾಜರು ಪಡಿಸಿದ್ದು ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.