- Advertisement -
- Advertisement -
ಉಡುಪಿ: ಇಲ್ಲಿನ ಸಿಟಿ ಬಸ್ ನಿಲ್ದಾಣದ ಬಳಿ ಆಡುತ್ತಿದ್ದ ಇಬ್ಬರು ಬಾಲಕರು ಅಪಹರಣಕ್ಕೆ ಒಳಗಾಗಿದ್ದಾರೆ. ಹೊಸನಗರ ತಾಲೂಕಿನ ಚಿಕ್ಕಪೇಟೆಯ ನಿವಾಸಿ ನಾಗರಾಜ ಎಂಬವರ ಮಗ ಸಂತೋಷ (11) ಹಾಗೂ ನಾಗರಾಜ ಅವರ ಪತ್ನಿಯ ತಂಗಿ ಮಂಗಳ ಎಂಬವರ ಪುತ್ರ ವಿಷ್ಣು (9) ನಾಪತ್ತೆಯಾಗಿರುವ ಬಾಲಕರು. ಇವರು ಅಪಹರಣಕ್ಕೆ ಒಳಗಾಗಿರುವ ಕುರಿತು ಶಂಕಿಸಿ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಲೆಗೆ ರಜೆ ಇದ್ದ ಕಾರಣ ಉಡುಪಿಯ ಸಿಟಿ ಬಸ್ ನಿಲ್ದಾಣದ ಬಳಿ ಆಡುತ್ತಿದ್ದ ಸಂತೋಷ್ ಹಾಗೂ ವಿಷ್ಣು ನಾಪತ್ತೆಯಾಗಿದ್ದು ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಈಗ ಇವರು ಅಪಹರಣಕ್ಕೆ ಒಳಾಗಿರಬಹುದು ಎಂದು ಶಂಕಿಸಲಾಗಿದೆ.
.
- Advertisement -