Monday, May 6, 2024
Homeತಾಜಾ ಸುದ್ದಿರಾಜ್ಯಾದ್ಯಂತ ಯುಗಾದಿ ಹಬ್ಬವನ್ನು ಧಾರ್ಮಿಕ ದಿನವನ್ನಾಗಿ ಆಚರಣೆ: ಮುಜರಾಯಿ‌ ಸಚಿವೆ ಶಶಿಕಲಾ ಜೊಲ್ಲೆ‌ ಆದೇಶ

ರಾಜ್ಯಾದ್ಯಂತ ಯುಗಾದಿ ಹಬ್ಬವನ್ನು ಧಾರ್ಮಿಕ ದಿನವನ್ನಾಗಿ ಆಚರಣೆ: ಮುಜರಾಯಿ‌ ಸಚಿವೆ ಶಶಿಕಲಾ ಜೊಲ್ಲೆ‌ ಆದೇಶ

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಯುಗಾದಿ ಹಬ್ಬವನ್ನು ಧಾರ್ಮಿಕ ದಿನವನ್ನಾಗಿ ರಾಜ್ಯಾದ್ಯಂತ ಆಚರಿಸಲು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಆದೇಶ ಮಾಡಿದ್ದಾರೆ. ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಿಗೆ ಸುತ್ತೋಲೆ ಹೊರಡಿಸುವಂತೆ ಸೂಚನೆ ನೀಡಿದ್ದಾರೆ.

ಚಾಂದ್ರಮಾನ ಮತ್ತು ಸೌರಮಾನ ಯುಗಾದಿಯ ದಿನಗಳಂದು ಇಲಾಖಾ ವ್ಯಾಪ್ತಿಯ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಧಾರ್ಮಿಕ ದಿನಾಚರಣೆ ಆಚರಿಸುವಂತೆ ಸೂಚನೆ ನೀಡಲಾಗಿದ್ದು, ಸೂಕ್ತ ಸುತ್ತೋಲೆ ಹೊರಡಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಗೆ ಸಚಿವೆ ಜೊಲ್ಲೆ ನಿರ್ದೇಶನ ನೀಡಿದ್ದಾರೆ.

ದೇವಾಲಯಗಳಲ್ಲಿ ಪಂಚಾಂಗ ಶ್ರವಣ, ಹರಿಕಥೆ, ವಿಶೇಷ ಪೂಜೆ, ಭಜನೆ, ಹರಿಕಥೆ, ಪ್ರಸಾದ ವಿತರಣೆ ಮುಂತಾದ ಕಾರ್ಯಕ್ರಮ ಹಮ್ಮಿಕೊಂಡು ಧಾರ್ಮಿಕ ದಿನವನ್ನು ವಿಜೃಂಭಣೆಯಿಂದ ಆಚರಣೆ ಮಾಡಲು ಸೂಚಿಸಲಾಗಿದೆ

ಅಲ್ಲದೇ ರಾಜ್ಯದ ಅಭಿವೃದ್ದಿಗಾಗಿ ಇದೇ ಸಂಧರ್ಭದಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆಗಳನ್ನು ರಾಜ್ಯದ ದೇವಾಲಯಗಳಲ್ಲಿ ಕೈಗೊಳ್ಳಲು‌ ಕೂಡಾ ಸಚಿವೆ ಶಶಿಕಲಾ ಜೊಲ್ಲೆ ಇಲಾಖಾಧಿಕಾರಿಗಳಿಗೆ ಆದೇಶಿಸಿದ್ದಾರೆ.

- Advertisement -
spot_img

Latest News

error: Content is protected !!