Sunday, May 19, 2024
Homeಕರಾವಳಿಮಂಗಳೂರು; ಕೊಲೆಯತ್ನ ಪ್ರಕರಣ; ಆರೋಪಿಯನ್ನು ಬಂಧಿಸಿದ ಉಳ್ಳಾಲ ಪೊಲೀಸರು

ಮಂಗಳೂರು; ಕೊಲೆಯತ್ನ ಪ್ರಕರಣ; ಆರೋಪಿಯನ್ನು ಬಂಧಿಸಿದ ಉಳ್ಳಾಲ ಪೊಲೀಸರು

spot_img
- Advertisement -
- Advertisement -

ಮಂಗಳೂರು; ; ಕೊಲೆಯತ್ನ ಆರೋಪದಡಿ ಉಳ್ಳಾಲ ಪೊಲೀಸರು ಆರೋಪಿ ತಲ್ಹತ್‌ ಎಂಬಾತನನ್ನು ಬಂಧಿಸಿದ್ದಾರೆ,  ಉಚ್ಚಿಲ ಸಮೀಪ ಆರೀಫ್ ಎಂಬಾತನ‌ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಈತನನ್ನು ಬಂಧಿಸಲಾಗಿದೆ.

 ನಾಲ್ಕು ತಿಂಗಳ ಹಿಂದೆ ಘಟನೆ ನಡೆದಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನೌಫಾಲ್, ತಲ್ಹತ್‌ ತಲೆಮರೆಸಿಕೊಂಡಿದ್ದು, ಈ ಪೈಕಿ ತಲ್ಹತ್‌ ನನ್ನು ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೀನಿನ ವ್ಯಾಪಾರ ಸಂಬಂಧಿಸಿದ ಹಣದ ವಿಚಾರಕ್ಕೆ ಕೊಲೆಯತ್ನ ನಡೆದಿತ್ತು ಎನ್ನುವುದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಒಟ್ಟು ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಈ ಹಿಂದೆ ಆಚಿ ,ನೌಫಾಲ್,ಅಶ್ಫಾಕ್,ನಿಸಾಕ್,ರಿಫತ್ ಆಲಿ,ರಹೀಮ್ ಎಂಬವರನ್ನು ಬಂಧಿಸಲಾಗಿತ್ತು.

- Advertisement -
spot_img

Latest News

error: Content is protected !!