- Advertisement -
- Advertisement -
ಬೆಂಗಳೂರು: ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಮಂಗಳವಾರ ಮುಂಜಾನೆ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಅಪ್ಪ ನಿಧನರಾಗಿದ್ದಾರೆ ಎಂದು ಚಾಂಡಿ ಅವರ ಪುತ್ರ ಫೇಸ್ ಬುಕ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ 79 ವರ್ಷದ ನಾಯಕ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ದೀರ್ಘಕಾಲದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ. ಉಮ್ಮನ್ ಚಾಂಡಿ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.
- Advertisement -