- Advertisement -
- Advertisement -
ಮಂಗಳೂರು; ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಬ್ರಹ್ಮರಥೋತ್ಸವ ವೇಳೆ ತೇರು ಮುರಿದು ಬಿದ್ದಿದೆ. ಶನಿವಾರ ಬೆಳಗ್ಗಿನ ಜಾವ ಸುಮಾರು 1.40 ರಿಂದ 2 ಗಂಟೆ ವೇಳೆ ಬ್ರಹ್ಮರಥೋತ್ಸವ ತೇರಿನ ಮೇಲ್ಭಾಗ ಕುಸಿದು ಬಿದ್ದಿದೆ.
ತೇರು ಮುರಿದು ಬೀಳುತ್ತಿದ್ದಂತೆ ಅರ್ಚಕರು ತೇರಿನಲ್ಲೇ ಇದ್ದರು. ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎನ್ನಲಾಗಿದೆ. ಈ ಘಟನೆಯು ಭಕ್ತ ಸಮೂಹದಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿದೆ. ಬಳಿಕ ದೇವರ ಉತ್ಸವವನ್ನು ಚಂದ್ರ ಮಂಡಲ ರಥದಲ್ಲಿ ದೇವರ ಉತ್ಸವ ಮುಂದುವರಿಸಲಾಯಿತು. ಸದ್ಯ ಘಟನೆ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಇದೆಕ್ಕೆಲ್ಲಾ ದವರ ಮುನಿಸೇ ಕಾರಣ ಎನ್ನಲಾಗುತ್ತಿದೆ.
- Advertisement -