Thursday, May 9, 2024
Homeಕರಾವಳಿಮಂಗಳೂರುನಾಳೆ ನಿಗದಿಯಾಗಿದ್ದ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಮಂಗಳೂರು ಭೇಟಿ ರದ್ದು

ನಾಳೆ ನಿಗದಿಯಾಗಿದ್ದ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಮಂಗಳೂರು ಭೇಟಿ ರದ್ದು

spot_img
- Advertisement -
- Advertisement -

ಮಂಗಳೂರು: ಮಂಗಳೂರಿನಲ್ಲಿ ನಾಳೆ ನಿಗದಿಯಾಗಿದ್ದ ಬಿಜೆಪಿ ಬೂತ್ ಕಾರ್ಯಕರ್ತರ ಸಮಾವೇಶ ಮುಂದೂಡಿಕೆಯಾಗಿದೆ.

ಕೇಂದ್ರ ವಿದೇಶಾಂಗ ವ್ಯವಹಾರಗಳು ಮತ್ತು ಸಂಸ್ಕೃತಿ ಇಲಾಖೆ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಈ ಸಮಾವೇಶದಲ್ಲಿ ಪಾಲ್ಗೊಳ್ಳಬೇಕಿದ್ದು, ಸಂಘ ನಿಕೇತನದಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮ ಮುಂದೂಡಲ್ಪಟ್ಟಿದೆ.

ಲೋಕಸಭಾ ಚುನಾವಣೆಗೆ ನಿನ್ನೆ ಬಿಡುಗಡೆಯಾಗಿದ್ದ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಮೀನಾಕ್ಷಿ ಲೇಖಿ ಹಾಲಿ ಸಂಸದೆಯಾಗಿರುವ ನವದೆಹಲಿ ಕ್ಷೇತ್ರದಿಂದ ಬಿಜೆಪಿ ನಾಯಕಿಯಾಗಿದ್ದ ದಿ. ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಸ್ವರಾಜ್ ಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

ಟಿಕೆಟ್ ನಿರಾಕರಿಸಲ್ಪಟ್ಟ ಬೆನ್ನಲ್ಲೇ ಕೇಂದ್ರ ಸಚಿವೆ ಲೇಖಿ ಮಂಗಳೂರು ಭೇಟಿ ರದ್ದುಗೊಂಡಿದೆ.

ನಾಳೆ ನಿಗದಿಯಾಗಿದ್ದ ಬೂತ್ ಸಮಾವೇಶ ಮುಂದೂಡಿಕೆಯಾಗಿರುವ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಾಹಿತಿ ನೀಡಿದೆ.‌

- Advertisement -
spot_img

Latest News

error: Content is protected !!