- Advertisement -
- Advertisement -
ಬೆಂಗಳೂರು: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಹಾಗೂ ರಾಜ್ಯ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರಿಗೆ ಕೊರೋನಾ ಸೋಂಕು ತಗುಲಿದೆ.
ತಮಗೆ ಕೊರೋನಾ ಬಾದೆ ತಗುಲಿರುವ ವಿಚಾರವನ್ನು ಕೇಂದ್ರ ಸಚಿವರು ತಮ್ಮ ಟ್ವಿಟರ್ ಖಾತೆ ಮೂಲಕ ಬಹಿರಂಗ ಮಾಡಿದ್ದಾರೆ. ರೋಗ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದೆ. ಪರೀಕ್ಷೆಗಳಲ್ಲಿ ತಮಗೆ ಕೋವಿಡ್ ಸೋಂಕು ಇರುವುದು ಖಚಿತಪಟ್ಟಿದೆ ಎಂದು ಸದಾನಂದ ಗೌರು ಹೇಳಿಕೊಂಡಿದ್ದಾರೆ. ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದ ಎಲ್ಲರೂ ಎಚ್ಚರಿಕೆ ವಹಿಸುವಂತೆಯೂ ಕೇಂದ್ರ ಸಚಿವರು ಮನವಿ ಮಾಡಿಕೊಂಡಿದ್ದಾರೆ.
- Advertisement -