- Advertisement -
- Advertisement -
ಬೆಂಗಳೂರು: ಶೃಂಗೇರಿ ಶಾರದಾ ಪೀಠದ ಕಿರಿಯ ಜಗದ್ಗುರು ವಿಧುಶೇಖರ ಮಹಾಸ್ವಾಮೀಜಿ ಅವರನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಇಂದು ಭೇಟಿ ಮಾಡಿದರು.
ಬೆಂಗಳೂರಿನಲ್ಲಿ ಇಂದು ವಿಧುಶೇಖರ ಮಹಾಸ್ವಾಮೀಜಿ ಭೇಟಿ ಮಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಶೀರ್ವಾದ ಪಡೆದರು. ನಂತರ ಕೆಲವು ಹೊತ್ತು ಜಗದ್ಗುರುಗಳ ಜೊತೆ ಸಚಿವೆ ಶೋಭಾ ಕರಂದ್ಲಾಜೆ ಮಾತುಕತೆ ನಡೆಸಿದರು.
ವಿಜಯ ಯಾತ್ರೆಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇರುವ ಶೃಂಗೇರಿ ಕಿರಿಯ ಜಗದ್ಗುರುಗಳನ್ನು ಹಲವು ರಾಜಕೀಯ ಮುಖಂಡರು ಭೇಟಿ ಮಾಡಿ ಆಶೀರ್ವಾದ ಪಡೆಯುತ್ತಿದ್ದಾರೆ.
- Advertisement -