Monday, April 29, 2024
Homeಕರಾವಳಿಮಂಗಳೂರು; ಮನೆ ಕಟ್ಟಲು ನೆರವಾಗೋದಾಗಿ ಮಹಿಳೆಯ ಚಿನ್ನಾಭರಣ ಪಡೆದು ವಂಚನೆ

ಮಂಗಳೂರು; ಮನೆ ಕಟ್ಟಲು ನೆರವಾಗೋದಾಗಿ ಮಹಿಳೆಯ ಚಿನ್ನಾಭರಣ ಪಡೆದು ವಂಚನೆ

spot_img
- Advertisement -
- Advertisement -

ಮಂಗಳೂರು: ಮನೆ ಕಟ್ಟಲು ಸಹಾಯ ಮಾಡೋದಾಗಿ ಹೇಳಿ  ವ್ಯಕ್ತಿಯೊಬ್ಬ ಮಹಿಳೆಯ ಚಿನ್ನಾಭರಣ ಪಡೆದು ವಂಚಿಸಿರುವ ಘಟನೆ ಮಂಗಳೂರಿನ ತೊಕ್ಕೊಟ್ಟಿನಲ್ಲಿ ನಡೆದಿದೆ.

ಮಾ.26ರಂದು ತೊಕ್ಕೊಟ್ಟು ರೈಲ್ವೆ ಹಳಿಯ ಬಳಿ ಆತಿಕಾ ಎಂಬವರನ್ನು ಸುಮಾರು 50 ವರ್ಷ ಪ್ರಾಯದ ಅಪರಿಚಿತ ಗಂಡಸು ತನ್ನ ಹೆಸರು ರಶೀದ್ ಎಂಬುದಾಗಿ ಪರಿಚಯ ಮಾಡಿಕೊಂಡಿದ್ದ.ಬಳಿಕ ಅದೇ ದಿನ ಆತೀಕಾ ವಾಸವಿರುವ ಬಾಡಿಗೆ ಮನೆಗೆ ಬಂದಿದ್ದ ರಶೀದ್ ‘ನೀವು ಇಷ್ಟು ಬಾಡಿಗೆ ಕೊಟ್ಟು ಈ ಮನೆಯಲ್ಲಿ ಇರುತ್ತೀರಾ, ನೀವು ಬೇರೆ ಮನೆ ಮಾಡಲು ನಾನು ವ್ಯವಸ್ಥೆ ಮಾಡುತ್ತೇನೆ. ನಾಳೆ ಬಂದರ್ ಮಸೀದಿಯಲ್ಲಿ ನನಗೆ ಸಿಗಬೇಕು’ ಎನ್ನುತ್ತಾ ಎರಡು ಮೊಬೈಲ್ ಸಂಖ್ಯೆಗಳನ್ನು ನೀಡಿ ಹೋಗಿದ್ದ.

ಮಾ.27ರಂದು ಮಧ್ಯಾಹ್ನ ಆತಿಕಾ ನಗರದ ಬಂದರ್ ಮಸೀದಿಗೆ ಬಂದಾಗ ಅವರನ್ನು ರಶೀದ್ ಮಧ್ಯಾಹ್ನ 1:45ಕ್ಕೆ ಫಳ್ನೀರ್ ರಸ್ತೆಯ ಹೊಟೇಲ್‌ನ ರೂಮಿಗೆ ಕರೆದುಕೊಂಡು ಹೋಗಿ ‘ಈಗ ಶೇಖ್‌ನ ಹೆಂಡತಿ ಬರುತ್ತಾರೆ. ನಿಮ್ಮ ಮೈಮೇಲಿರುವ ಚಿನ್ನಾಭರಣ ನೋಡಿದರೆ ಅವರು ಸಹಾಯ ಮಾಡುವುದಿಲ್ಲ. ಅದನ್ನು ನನ್ನ ಬಳಿ ಇಟ್ಟುಕೊಳ್ಳುತ್ತೇನೆ’ ಎಂದಿದ್ದ ಎನ್ನಲಾಗಿದೆ.

ಹೀಗೆ ಆತಿಕಾ ತನ್ನ ಮೈಮೇಲಿದ್ದ ಚಿನ್ನದ ಕಿವಿಯೋಲೆ, ಉಂಗುರ, ಬಳೆ ಇತ್ಯಾದಿಗಳನ್ನು ನೀಡಿದ ಬಳಿಕ ಅಲ್ಲಿಂದ ಮತ್ತೊಂದು ಹೊಟೇಲ್‌ಗೆ ಕರೆದುಕೊಂಡು ಹೋಗಿ ಕುಳ್ಳಿರಿಸಿ ಶೇಖ್‌ನ ಪತ್ನಿಯನ್ನು ಕರೆದುಕೊಂಡು ಬರುವುದಾಗಿ ಹೇಳಿ ಹೊರಗೆ ಹೋದ ರಶೀದ್ ಎಂಬ ಹೆಸರಿನ ವ್ಯಕ್ತಿ ವಾಪಸ್ ಬಂದಿಲ್ಲ. ಸುಮಾರು 2 ಲ.ರೂ. ಮೌಲ್ಯದ ಚಿನ್ನಾಭರಣವನ್ನು ಪಡೆದು ವಂಚಿಸಿರುವುದಾಗಿ ಆತಿಕಾ ಬಂದರ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!