- Advertisement -
- Advertisement -
ಬೈಕಂಪಾಡಿ: ಕರ್ಕೇರ ಮೂಲ ಸ್ಥಾನ ಜರಂದಾಯ ದೈವಸ್ಥಾನ ಮತ್ತು ನಾಗನ ಬ್ರಹ್ಮ ಪೀಠವನ್ನು ದುಷ್ಕರ್ಮಿಗಳು ಹಾನಿಮಾಡಿರುವ ಘಟನೆ ಬೈಕಂಪಾಡಿಯಲ್ಲಿ ಶನಿವಾರ ರಾತ್ರಿ ನಡೆದಿದೆ.
ಬೆಳಗ್ಗೆ ದೈವಸ್ಥಾನಕ್ಕೆ ಆಗಮಿಸಿದವರು ಹಾನಿಯಾಗಿದ್ದನ್ನು ಗಮನಿಸಿ ಸಂಬಂಧಪಟ್ಟವರಿಗೆ ದೂರವಾಣಿ ಮೂಲಕ ತಿಳಿಸಿದ್ದಾರೆ ಎಂದು ಹೇಳಲಾಗಿದೆ . ಸದ್ಯ ಸ್ಥಳಕ್ಕೆ ಧಾವಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ದುಷ್ಕರ್ಮಿಗಳು ಒಂದು ನಾಗನ ಮೂರ್ತಿಯನ್ನು ಭಗ್ನ ಮಾಡಿದ್ದಲ್ಲದೆ, ನಂದಿಯ ಕಲ್ಲಿನ ವಿಗ್ರಹಕ್ಕೂ ಹಾನಿಮಾಡಿದ್ದಾರೆ. ಗೇಟುಗಳನ್ನು ಒಡೆದು ಹಾಕಿದ್ದು, ಕಪಾಟನ್ನು ಒಡೆದು ಚೆಲ್ಲಾಪಿಲ್ಲಿ ಮಾಡಿದ್ದಾರೆ.
- Advertisement -