- Advertisement -
- Advertisement -
ಬೆಳ್ತಂಗಡಿ: ಮೇ 03 ರಂದು ಸುಮಾರು 55 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಯಾವುದೋ ಖಾಯಿಲೆಯಿಂದ ಅಸ್ವಸ್ಥಗೊಂಡ ಘಟನೆ ಉಜಿರೆ ಕಾಲೇಜು ರಸ್ತೆಯಲ್ಲಿರುವ ರೋಟರಿ ಬಸ್ ನಿಲ್ದಾಣದ ಬಳಿ ನಡೆದಿದೆ.
ತಕ್ಷಣ ಸಾರ್ವಜನಿಕರೊಬ್ಬರು 108 ಗೆ ಕಾಲ್ ಮಾಡಿ ಆಂಬ್ಯುಲೆನ್ ಕರೆಸಿದ್ದಾರೆ. ಅಸ್ವಸ್ಥಗೊಂಡಿದ್ದ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಇಂದು ಆ ವ್ಯಕ್ತಿ ಮೃತಪಟ್ಟಿದ್ದಾರೆ.
- Advertisement -