- Advertisement -
- Advertisement -
ಮಂಗಳೂರು: ಹೆಡ್ ಕಾನ್ಸ್ ಟೇಬಲ್ ಮೇಲೆ ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಯೋರ್ವ ಮಾರಾಕಾಯುಧಗಳಿಂದ ದಾಳಿ ನಡೆಸಿದ ಘಟನೆ ಮಂಗಳೂರಿನ ನ್ಯೂಚಿತ್ರ ಜಂಕ್ಷನ್ ಬಳಿ ನಡೆದಿದೆ.
ಬಂದರು ಪೊಲೀಸ್ ಠಾಣೆಯ ಗಣೇಶ್ ಕಾಮತ್ ಹಲ್ಲೆಗೊಳಗಾದ ಹೆಡ್ ಕಾನ್ಸ್ ಟೇಬಲ್. ಇಂದು ಮಧ್ಯಾಹ್ನ ಇವರು ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಯೋರ್ವ ಆಯುಧದಿಂದ ಹಲ್ಲೆ ನಡೆಸಿದ್ದಾನೆ.
ಪರಿಣಾಮವಾಗಿ ಗಣೇಶ್ ಕಾಮತ್ ಕೈಗೆ ತೀವ್ರವಾಗಿ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆರೋಪಿಗೆ ಶೋಧ ನಡೆಸಲಾಗುತ್ತಿದೆ.
ಇನ್ನು ಯಾವ ಕಾರಣಕ್ಕೆ ಹಲ್ಲೆ ನಡೆಸಿದ್ದಾನೆ ಎಂಬ ಬಗ್ಗೆ ಪೊಲೀಲರು ತನಿಖೆ ನಡೆಸುತ್ತಿದ್ದಾರೆ.
- Advertisement -