Tuesday, May 14, 2024
Homeಕರಾವಳಿಉಡುಪಿಉಡುಪಿ: ಅಪರಿಚಿತ ವ್ಯಕ್ತಿಯನ್ನು ನಂಬಿ ಚಿನ್ನಾಭರಣ ಕಳೆದುಕೊಂಡ ಮಹಿಳೆ

ಉಡುಪಿ: ಅಪರಿಚಿತ ವ್ಯಕ್ತಿಯನ್ನು ನಂಬಿ ಚಿನ್ನಾಭರಣ ಕಳೆದುಕೊಂಡ ಮಹಿಳೆ

spot_img
- Advertisement -
- Advertisement -

ಉಡುಪಿ : ಅಪರಿಚಿತ ವ್ಯಕ್ತಿಯನ್ನು ನಂಬಿ ಮಹಿಳೆಯೊಬ್ಬರು ಚಿನ್ನಾಭರಣ ಕಳೆದುಕೊಂಡ ಘಟನೆ ಪಡುಬಿದ್ರಿಯ ಮೂಡು ಪಲಿಮಾರಿನಲ್ಲಿ ನಡೆದಿದೆ.

ಇಲ್ಲಿನ  ಶೋಭಾ ಅವರ ಮನೆಗೆ ಮೇ 6ರಂದು ಬಂದಿದ್ದ ಅಪರಿಚಿತ ವ್ಯಕ್ತಿಯೊಬ್ಬ ತನ್ನನ್ನು ಹರೀಶ್‌ ಪುತ್ತೂರು ಹಾಗೂ ತಾನು ವಿಶ್ವಕರ್ಮ ಕುಲದವನೆಂದು ಪರಿಚಯಿಸಿಕೊಂಡು ಶೋಭಾ ಅವರಿಂದ 1.65 ಲಕ್ಷ ರೂ.ಗಳ ಚಿನ್ನಾಭರಣವನ್ನು ಪಡೆದು ಮೋಸ ಮಾಡಿರುವುದಾಗಿ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯು ಕುಂದಾಪುರದಲ್ಲಿ ಇದ್ದ ತನ್ನ 80 ಲಕ್ಷ ರೂ. ಮೌಲ್ಯದ ಜಾಗವು ಮಾರಾಟವಾಗಿದ್ದು, ಅದರ ದಾಖಲೆಗಳು ಬ್ಯಾಂಕಿನಲ್ಲಿ ಇರುವುದರಿಂದ ಅವುಗಳನ್ನು ಬಿಡಿಸಿಕೊಳ್ಳಲು ತನಗೆ ಸಹಾಯ ಮಾಡುವಂತೆ ಕೇಳಿಕೊಂಡಿದ್ದ. ಶೋಭಾ ಅವರು ತನ್ನಲ್ಲಿ ಹಣ ಇಲ್ಲವೆಂದರೂ ಅವರ ಅಕ್ಕ ಶ್ಯಾಮಲಾ ಹಾಗೂ ಶೋಭಾರನ್ನು ಆರೋಪಿಯು ನಂಬಿಸಿ, ಅಕ್ಕ ಶ್ಯಾಮಲಾ ಅವರಿಂದ 6 ಗ್ರಾಂ ತೂಕದ ಚಿನ್ನದ ಉಂಗುರ, ಶೋಭಾ ಅವರಿಂದ ಎರಡೂವರೆ ಪವನ್‌ ತೂಕದ ಪವನ್‌ ಸರ, ಒಂದೂಕಾಲು ಪವನ್‌ನ ಚಿನ್ನದ ಬೆಂಡೋಲೆ ಮತ್ತು ಜುಮ್ಕಿಯನ್ನು ತೆಗೆದುಕೊಂಡು ಹೋಗಿದ್ದ. ಚಿನ್ನದ ಹಣವನ್ನು ತನ್ನ ಜಾಗ ಮಾರಾಟ ಮಾಡಿ ಬಂದಿರುವ ಹಣದಲ್ಲಿ ಮೇ 16ರಂದು ನಿಮ್ಮ ಹಣಕ್ಕೆ ಹೆಚ್ಚುವರಿಯಾಗಿ ಹಣ ಸೇರಿಸಿ ಕೊಡುತ್ತೇನೆ ಎಂದು ಶೋಭಾ ಅವರನ್ನು ನಂಬಿಸಿದ್ದ.

ಮೋಸದ ಉದ್ದೇಶದಿಂದಲೇ ಆರೋಪಿಯು ಈ ಕೃತ್ಯವೆಸಗಿದ್ದು, ಮೇ 14ರಿಂದ ಎರಡು ದಿನ ಮನೆಯಲ್ಲೇ ಬೀಡು ಬಿಟ್ಟಿದ್ದ. ಆ ಬಳಿಕ ಹಿಂದಿರುಗಿ ಬಾರದೆ ಮೋಸ ಮಾಡಿರುವುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಶೋಭಾ ಅವರು ತಿಳಿಸಿದ್ದಾರೆ.ಇದೀಗ ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

- Advertisement -
spot_img

Latest News

error: Content is protected !!