- Advertisement -
- Advertisement -
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ದಿಂಡಿಂಬೆ ಕೂಡಿಗೆ ಎಂಬಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.ಬೆಳಾಲು ಗ್ರಾಮದ ಯಾದವ ಎಂಬವರು ಭಾನುವಾರ ಹಳ್ಳಿಮದ್ದಿಗೆಂದು ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿಗೆ ತೆರಳಿದ್ದರು. ಈ ವೇಳೆ ಏನೋ ಕೊಳೆತ ವಾಸನೆ ಬರುತ್ತಿದ್ದದರಿಂದ ಹತ್ತಿರಕ್ಕೆ ಹೋಗಿ ನೋಡಿದಾಗ ಹೊಳೆಯ ಬದಿಯಲ್ಲಿರುವ ಕಲ್ಲುಗಳ ಮಧ್ಯೆ ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಕೊಳೆತು ಸ್ಥಿತಿಯಲ್ಲಿ ಪತ್ತೆಯಾಗಿದೆ.
ಅದರಂತೆ ಅವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ತಿಳಿಸಿದ್ದಾರೆ.
- Advertisement -