ಚೆನ್ನೈ: ನಟ ಹಾಗೂ ಮಕ್ಕಳ ನೀಧಿಮಯ್ಯಂ ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಅವರ ಕಾರಿನ ಮೇಲೆ ಅಪರಿಚಿತರು ದಾಳಿ ನಡೆಸಿದ ಘಟನೆ ನಿನ್ನೆ ರಾತ್ರಿ 11.14ರ ವೇಳೆಗೆ ನಡೆದಿದೆ.
ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯ ಗಾಂಧಿ ರಸ್ತೆಯಲ್ಲಿ ಕಮಲ್ ಹಾಸನ್ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಅಡ್ಡಗಟ್ಟಿದ ಅಪರಿಚಿತ ವ್ಯಕ್ತಿ ಕಾರಿನ ಗ್ಲಾಸ್ ಒಡೆಯಲು ಪ್ರಯತ್ನಿಸಿದ್ದಾನೆ. ಆದರೆ ಕಾರಿಗೆ ಯಾವುದೇ ರೀತಿ ಧಕ್ಕೆ ಆಗಿಲ್ಲ. ಈ ಸಂಬಂಧ ಇನ್ನೂ ಎಫ್ಐಆರ್ ದಾಖಲಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾನುವಾರವಷ್ಟೇ ಕಮಲ್ ಹಾಸನ್ ಅವರು ಕಾಂಚಿಪುರಂ ವಿಧಾನಸಭಾ ಕ್ಷೇತ್ರದ ಮಕ್ಕಳ ನೀಧಿಮಯ್ಯಂ ಪಕ್ಷದ ಅಭ್ಯರ್ಥಿ ಎಸ್ ಕೆಪಿ ಗೋಪಿನಾಥ್ ಪರವಾಗಿ ಪ್ರಚಾರ ನಡೆಸಿದ್ದರು. ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ವಿಷ್ಣುಕಾಂಚಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಾಂಚಿಪುರಂ ಬಳಿ ನಮ್ಮ ನಾಯಕ ಕಮಲ್ ಹಾಸನ್ ಕಾರನ್ನು ಅಡ್ಡಗಟ್ಟಿ ಗ್ಲಾಸ್ ಒಡೆಯುವುದಕ್ಕೆ ಪ್ರಯತ್ನಿಸಿದ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ಮಕ್ಕಳ ನೀಧಿಮಯ್ಯಂ ಪಕ್ಷದ ಕಾರ್ಯದರ್ಶಿ ಎ ಜಿ ಮೌರ್ಯ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.