- Advertisement -
- Advertisement -
ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ರವರ ಪ್ರಥಮ ವರ್ಷದ ಸಂಸ್ಮರಣಾ ಕಾರ್ಯಕ್ರಮದ ಪ್ರಯುಕ್ತ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಆಸ್ಕರ್ ಅವರ ಪ್ರತಿಮೆಯನ್ನು ನಾಯಕರು ಅನಾವರಣಗೊಳಿಸಿದರು.
ಈ ವೇಳೆ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ ,ಆಸ್ಕರ್ ಫರ್ನಾಂಡಿಸ್ ಅವರು ರಾಷ್ಟ್ರಮಟ್ಟದಲ್ಲಿ ಪ್ರಭಾವಿ ನಾಯಕರಾಗಿದ್ದರು. ದೇಶಕ್ಕೆ ಅವರ ಕೊಡುಗೆ ಅಪಾರ. ಅವರ ಪ್ರತಿಮೆಯನ್ನು ಬ್ರಹ್ಮಗಿರಿ ಸರ್ಕಲ್ ನಲ್ಲಿ ಪ್ರತಿಷ್ಠಾಪಿಸಲು ಈಗಾಗಲೇ ಕ್ರಮ ಕೈಗೊಂಡಿದ್ದೇವೆ. ಮುಂದೆ ಅದನ್ನು ಮಾಡಲಿದ್ದೇವೆ ಎಂದು ಹೇಳಿದರು.
- Advertisement -