- Advertisement -
- Advertisement -
ಉಪ್ಪಿನಂಗಡಿ: ಮುಂದಿನ ಸೀಟ್ ನಲ್ಲಿ ಕುಳಿತಿದ್ದ ಯುವತಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಸುಳ್ಯ ಅರೇಬಿಕ್ ಶಾಲೆಯ ಶಿಕ್ಷಕನನ್ನು ಬಸ್ ನ ಚಾಲಕ ಮತ್ತು ನಿರ್ವಾಹಕ ಸೇರಿ ಪೊಲೀಸರಿಗೆ ಒಪ್ಪಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.
ಕಿರುಕುಳ ನೀಡಿರುವ ವ್ಯಕ್ತಿಯನ್ನು ಚಿಕ್ಕಮಗಳೂರು ನಿವಾಸಿ ಮುಹಮ್ಮದ್ ಸೈಫುಲ್ಲಾ ಎಂದು ಗುರುತಿಸಲಾಗಿದೆ.
ಧರ್ಮಸ್ಥಳದಿಂದ ಉಪ್ಪಿನಂಗಡಿಗೆ ಸಂಚರಿಸುತ್ತಿದ್ದ KSRTC ಬಸ್ ನಲ್ಲಿ ಈ ಘಟನೆ ನಡೆದಿದ್ದು, ಯುವತಿ ತನ್ನ ಮನೆಯ ಸಮೀಪದಿಂದ ಬಸ್ ಗೆ ಹತ್ತಿದ್ದು, ಆ ಸಮಯದಿಂದಲೇ ಆರೋಪಿ ಮುಹಮ್ಮದ್ ಸೈಫುಲ್ಲಾ ಮೈ ಮುಟ್ಟಿ ಹಿಂಸೆ ನೀಡುತ್ತಿದ್ದ ಎಂದು ಯುವತಿ ಬಸ್ ನ ಚಾಲಕ ಮತ್ತು ನಿರ್ವಾಹಕರಿಗೆ ತಿಳಿಸಿದ್ದಾಳೆ.
ಕೂಡಲೇ ಬಸ್ ನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಬಸ್ ನ್ನು ತೆಗೆದುಕೊಂಡು ಹೋಗಿ ಸಮಯಪ್ರಜ್ಞೆ ಮೆರೆದಿದ್ದಾರೆ. ಸಂತ್ರಸ್ತ ಯುವತಿ ಠಾಣೆಯಲ್ಲಿ ಕಿರುಕುಳದ ಕುರಿತು ದೂರು ದಾಖಲಿಸಿದ್ದು, ತಕ್ಷಣವೇ ಆರೋಪಿಯನ್ನು ಬಂಧಿಸಿದ್ದಾರೆ.
- Advertisement -