Sunday, June 29, 2025
Homeಕರಾವಳಿಉಡುಪಿಉಪ್ಪಿನಂಗಡಿಯ ಮೇಸ್ತ್ರಿಗೆ ಒಲಿದ ಅದೃಷ್ಟ; ಕೇರಳ ಲಾಟರಿಯಲ್ಲಿ ಬಂತು 50 ಲಕ್ಷ ಬಹುಮಾನ

ಉಪ್ಪಿನಂಗಡಿಯ ಮೇಸ್ತ್ರಿಗೆ ಒಲಿದ ಅದೃಷ್ಟ; ಕೇರಳ ಲಾಟರಿಯಲ್ಲಿ ಬಂತು 50 ಲಕ್ಷ ಬಹುಮಾನ

spot_img
- Advertisement -
- Advertisement -

ಉಪ್ಪಿನಂಗಡಿಯ ಮೇಸ್ತ್ರಿಗೆ ಅದೃಷ್ಟವೊಂದು ಒಲಿದು ಬಂದಿದೆ. ಕೇರಳ ರಾಜ್ಯ ಲಾಟರಿಯಲ್ಲಿ ಉಪ್ಪಿನಂಗಡಿಯ ಇಳಂತಿಲ ನಿವಾಸಿ ಚಂದ್ರಯ್ಯ ಅವರು 50 ಲಕ್ಷ ರೂ.ಬಹುಮಾನ ಗೆದ್ದಿದ್ದಾರೆ.

ಮೇಸ್ತ್ರಿ ಆಗಿರುವ ಚಂದ್ರಯ್ಯ ಕಾನತ್ತೂರು ದೇವಸ್ಥಾನಕ್ಕೆ ಹೋಗಿದ್ದ ವೇಳೆ ಕಾಸರಗೋಡಿನಲ್ಲಿರುವ ಬೊಲ್ಪು ಲಕ್ಕಿ ಲಾಟರಿ ಏಜೆನ್ಸಿಯಲ್ಲಿ 500 ಬೆಲೆಯ  ಸೆ.20 ರಂದು ಡ್ರಾ ಇದ್ದ ಓಣಂ ಬಂಪರ್ ಲಾಟರಿ ಟಿಕೇಟ್ ಖರೀದಿಸಿದ್ದರು. ಇವರು ಖರೀದಿಸಿದ ಟಿಕೆಟ್‌ಗೆ ಬಂಪರ್ ಬಹುಮಾನವಾಗಿ 50ಲಕ್ಷ ರೂ. ಬಂದಿದೆ.

ಈ ಹಿಂದೆ ಇದೇ ಬೊಲ್ಪು ಲಕ್ಕಿ ಲಾಟರಿ ಏಜೆನ್ಸಿಯ ಮೂಲಕ ಟಿಕೆಟ್ ಖರೀದಿಸಿದ ಉಪ್ಪಿನಂಗಡಿ ಕೆಂಪಿಮಜಲು ಎಂಬಲ್ಲಿನ ಆನಂದ ಟೈಲರ್ (72) ಎಂಬವರಿಗೆ 80 ಲಕ್ಷ ರೂ.ಬಹುಮಾನ ಬಂದಿತ್ತು. ಇದೀಗ ಎರಡನೇ ಬಾರಿಗೆ ಉಪ್ಪಿನಂಗಡಿಗೆ ಅದೃಷ್ಟ ಲಕ್ಷ್ಮೀ ಒಲಿದಿದ್ದು ಅಚ್ಚರಿ ಮೂಡಿಸಿದೆ.

- Advertisement -
spot_img

Latest News

error: Content is protected !!