Saturday, May 4, 2024
Homeಕರಾವಳಿಉಡುಪಿಉಪ್ಪಿನಂಗಡಿಯ ಯುವತಿ ಉಡುಪಿಯಲ್ಲಿ ಆತ್ಮಹತ್ಯೆ ಪ್ರಕರಣ : ಇಂದು ರಾಜ್ಯ, ಕೇಂದ್ರ ಸರಕಾರದ ವಿರುದ್ಧ ಯೂತ್...

ಉಪ್ಪಿನಂಗಡಿಯ ಯುವತಿ ಉಡುಪಿಯಲ್ಲಿ ಆತ್ಮಹತ್ಯೆ ಪ್ರಕರಣ : ಇಂದು ರಾಜ್ಯ, ಕೇಂದ್ರ ಸರಕಾರದ ವಿರುದ್ಧ ಯೂತ್ ಕಾಂಗ್ರೆಸ್ ನಿಂದ ಪ್ರತಿಭಟನೆ

spot_img
- Advertisement -
- Advertisement -

ಉಡುಪಿ: ಉಪ್ಪಿನಂಗಡಿಯ ಯುವತಿ ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾದ ಪ್ರಕರಣ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಎಂ.ಬಿ.ಎ ಪದವೀಧರೆಯಾದ ಸಹನಾ ಕೆಲಸ ಸಿಗದ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿದ್ದರು,         

ಈ ಹಿನ್ನೆಲೆ ನಿರುದ್ಯೋಗ ಸಮಸ್ಯೆ ನಿವಾರಿಸದ ರಾಜ್ಯ, ಕೇಂದ್ರ ಸರಕಾರದ ವಿರುದ್ಧ  ಯುವ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ.ಉಡುಪಿಯಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

ಉಪ್ಪಿನಂಗಡಿಯ ಸಹನಾ ಉಡುಪಿಯ ಕಾಪುವಿನ ಕಟ್ಟಿಂಗೇರಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು, . ಒಂದು ವರ್ಷದ ಹಿಂದೆ ಮಂಗಳೂರಲ್ಲಿ ಎಂಬಿಎ ಮುಗಿಸಿದ್ದ ಸಹನಾ, ಉದ್ಯೋಗಕ್ಕಾಗಿ ಅಲೆದಾಡಿದ್ದಳು. ಆದರೆ, ಎಲ್ಲಿಯೂ ತನ್ನ ಅರ್ಹತೆಗೆ ತಕ್ಕ ಕೆಲಸ ಸಿಗದಿದ್ದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಳು.

- Advertisement -
spot_img

Latest News

error: Content is protected !!