Friday, June 27, 2025
Homeಪ್ರಮುಖ-ಸುದ್ದಿನ. 17 ರಂದು ಬೆಂಗಳೂರಿನಲ್ಲಿ ವಾಗೇಶ್ವರಿ ಪೂಜೆ ಮತ್ತು ನವದುರ್ಗಾ ಲೇಖನ ಸಂಕಲ್ಪ; ಕಾಪು ಮಾರಿಗುಡಿ...

ನ. 17 ರಂದು ಬೆಂಗಳೂರಿನಲ್ಲಿ ವಾಗೇಶ್ವರಿ ಪೂಜೆ ಮತ್ತು ನವದುರ್ಗಾ ಲೇಖನ ಸಂಕಲ್ಪ; ಕಾಪು ಮಾರಿಗುಡಿ ಅಭಿವೃದ್ಧಿ ಸಮಿತಿಯಿಂದ ಆಯೋಜನೆ

spot_img
- Advertisement -
- Advertisement -

ಬೆಂಗಳೂರು: ನವೆಂಬರ್ 17 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ವಾಗೇಶ್ವರಿ ಪೂಜೆ ಮತ್ತು ನವದುರ್ಗಾ ಲೇಖನ ಸಂಕಲ್ಪ ಕಾರ್ಯಕ್ರಮ ನಡೆಯಲಿದೆ.‌

ಭಾನುವಾರ ಅರಮನೆ ಮೈದಾನದ ಗಾಯತ್ರಿ ವಿಹಾರ್ ನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಕಾಪು ಮಾರಿಗುಡಿ ಅಭಿವೃದ್ಧಿ ಸಮಿತಿಯಿಂದ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ‌ ನೀಡಲಾಗಿದೆ.

ಕಾಪು ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ , ಉಪೇಂದ್ರ ಶೆಟ್ಟಿ ಮತ್ತು ಜೆ. ವಿಜಯ್ ಶೆಟ್ಟಿ ಖಾಸಗಿ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.ನವೆಂಬರ್ 17 ರಂದು ಬೆಳಗ್ಗೆ 9 ಗಂಟೆಗೆ ದೇವರ ಸಾನ್ನಿಧ್ಯದಲ್ಲಿ ಪಾರ್ಥನೆ ನಡೆಯಲಿದ್ದು, 10.09ಕ್ಕೆ ವಾಗೀಶ್ವರಿ ಪೂಜೆ ಮತ್ತು ನವದುರ್ಗಾ ಲೇಖನ ಸಂಕಲ್ಪ ಆರಂಭ ಆಗಲಿದೆ.

ಪೂಜೆಗೆ ನಾಲ್ಕು ಸಾವಿರಕ್ಕೂ ಹೆಚ್ಚು ಜನ ನೊಂದಣಿ ಮಾಡಿಕೊಂಡಿದ್ದು, ಬೆಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಹಾಗೂ ಉಡುಪಿ‌ ಜಿಲ್ಲೆಯ ಭಕ್ತರನ್ನು ಆಹ್ವಾನಿಸಲಾಗುತ್ತಿದೆ ಎಂದು ಪ್ರಕಾಶ್ ಶೆಟ್ಟಿ ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ಆಹ್ವಾನ ನೀಡಲಾಗಿದ್ದು, ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಶಿವದೂತೆ ಗುಳಿಗೆ ತುಳು ನಾಟಕ ಪ್ರದರ್ಶನವನ್ನೂ ಏರ್ಪಡಿಸಲಾಗಿದೆ.

- Advertisement -
spot_img

Latest News

error: Content is protected !!