ವಿವಾದದ ಕೇಂದ್ರವಿಂದುವಾಗಿರುವ ಕಾಂತಾರ ಸಿನಿಮಾದ ವರಾಹ ರೂಪಂ ಹಾಡಿಗೆ ಕೇರಳದ ಸ್ಥಳೀಯ ನ್ಯಾಯಾಲಯ ತಡೆ ನೀಡಿದೆ. ಈ ವಿವಾದದ ಬಗ್ಗೆ ‘ತೈಕ್ಕುಡಂ ಬ್ರಿಡ್ಜ್’ ಬ್ಯಾಂಡ್ನ ವಿಯಾನ್ ಫರ್ನಾಂಡಿಸ್ ಪ್ರತಿಕ್ರಿಯೆ ನೀಡಿದ್ದು, ನಮಗೆ ಕ್ರೆಡಿಟ್ ಕೊಟ್ಟರೆ ಈ ಹಾಡನ್ನು ಅವರು ಪ್ಲೇ ಮಾಡಿಕೊಳ್ಳುವುದರಲ್ಲಿ ಯಾವುದೇ ಸಮಸ್ಯೆ ಇಲ್ಲ’ ಎಂದು ಹೇಳಿದ್ದಾರೆ. ಈ ಮೂಲಕ ಹೊಂಬಾಳೆ ಫಿಲ್ಮ್ಸ್ ಗೆ ತಮ್ಮ ಬೇಡಿಕೆ ಮುಂದಿಟ್ಟಿದ್ದಾರೆ.
ತೈಕ್ಕುಡಂ ಬ್ರಿಡ್ಜ್’ ಹಣಕ್ಕಾಗಿ ಇಷ್ಟೆಲ್ಲ ಮಾಡುತ್ತಿದೆ ಎಂಬ ಆರೋಪವನ್ನು ತಳ್ಳಿ ಹಾಕಿದ್ದಾರೆ. ಕಾಂತಾರ ಚಿತ್ರದ ಮ್ಯೂಸಿಕ್ ಡೈರೆಕ್ಟರ್ ಬಿ. ಅಜನೀಶ್ ಲೋಕನಾಥ್ ಅವರು ನಮ್ಮ ಬ್ಯಾಂಡ್ನ ಸ್ಥಾಪಕರಲ್ಲೊಬ್ಬರಾದ ಗೋವಿಂದ್ ವಸಂತ್ ಅವರನ್ನು ಸಂಪರ್ಕಿಸಿದ್ದರು. ನಮ್ಮ ಮ್ಯಾನೇಜ್ಮೆಂಟ್ ಅವರು ಕಾಂತಾರ ತಂಡಕ್ಕೆ ಎಚ್ಚರಿಕೆ ನೀಡಿದೆ. ಈ ಚಿತ್ರ ರಿಲೀಸ್ಗೂ ಮೊದಲು ಅವರು ನಮ್ಮ ಜತೆ ಮಾತನಾಡಿ, ಹಾಡಿನಲ್ಲಿ ನಮ್ಮ ಬ್ಯಾಂಡ್ನ ಉಲ್ಲೇಖ ಮಾಡಿದ್ದರೆ ಸಾಕಿತ್ತು. ನಾವು ಕೇಸ್ ಹಾಕುತ್ತಿರಲಿಲ್ಲ’ ಎಂದಿದ್ದಾರೆ ವಿಯಾನ್.