Tuesday, May 7, 2024
Homeಕರಾವಳಿಮಾರ್ಚ್ 1 ರಿಂದ ಕೆಎಸ್ ಆರ್ ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಮಾರ್ಚ್ 1 ರಿಂದ ಕೆಎಸ್ ಆರ್ ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

spot_img
- Advertisement -
- Advertisement -

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕೆಎಸ್ ಆರ್ ಟಿಸಿ ನೌಕರರು ಮಾರ್ಚ್ 1 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ್ದ ರಾಜ್ಯ ಬಜೆಟ್ ನಲ್ಲಿ ಸಾರಿಗೆ ನೌಕರರ ಬೇಡಿಕೆಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿ ಮಾರ್ಚ್ 1 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಯಲ್ಲಿ 3,000 ಕ್ಕೂ ಹೆಚ್ಚು ನೌಕರರು ಮತ್ತು ಅವರ ಕುಟುಂಬ ಸದಸ್ಯರು ಭಾಗಿಯಾಗುವ ನಿರೀಕ್ಷೆಯಿದೆ.

ಸಾರಿಗೆ ನೌಕರರ ವೇತನ ಪರಿಷ್ಕರಣೆ, 7 ನೇ ವೇತನ ಆಯೋಗಕ್ಕೆ ಪರಿಗಣನೆ, ಮುಷ್ಕರದ ಅವಧಿಯಲ್ಲಿ ವಜಾಗೊಂಡ ನೌಕರರ ಮರು ನೇಮಕ, ನೌಕರರ ಮೇಲೆ ಹಾಕಿರುವ ಎಲ್ಲಾ ಮೊಕದ್ದಮೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.

- Advertisement -
spot_img

Latest News

error: Content is protected !!