- Advertisement -
- Advertisement -
ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರನ್ನು ಅಪಹರಿಸಿ ಮೂರು ದಿನ ಹಿಂಸೆ ನೀಡಲಾಗಿದೆ. ಈ ಬಗ್ಗೆ ಬೆಳ್ಳಂದೂರು ಠಾಣೆಗೆ ಸ್ವತಃ ವರ್ತೂರು ಪ್ರಕಾಶ್ ಅವರೇ ದೂರು ನೀಡಿದ್ದಾರೆ.
ಇನ್ನು ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಅವರನ್ನು ಅಪಹರಿಸಿರಬಹುದೆಂದು ಹೇಳಲಾಗಿದೆ. ಅಜ್ಞಾತ ಸ್ಥಳದಲ್ಲಿ ಮೂರು ದಿನ ಕೂಡಿಹಾಕಿ ಹಿಂಸೆ ನೀಡಲಾಗಿದೆ. ಕಾರಿನಲ್ಲಿ ಹೋಗುತ್ತಿದ್ದ ಅವರನ್ನು ಕಿಡ್ನಾಪ್ ಮಾಡಿ ಹಿಂಸೆ ನೀಡಲಾಗಿದೆ. ಅಪಹರಣಕಾರರಿಂದ ಬಿಡಿಸಿಕೊಂಡು ಬಂದ ವರ್ತೂರು ಪ್ರಕಾಶ್ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಬಗ್ಗೆ ಬೆಳ್ಳಂದೂರು ಠಾಣೆ ಪೊಲೀಸರಿಗೆ ವರ್ತೂರು ಪ್ರಕಾಶ್ ದೂರು ನೀಡಿದ್ದು, ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ ಎನ್ನಲಾಗಿದೆ.
- Advertisement -