Friday, May 17, 2024
Homeತಾಜಾ ಸುದ್ದಿಹುಲಿ ಉಗುರಿನ ಲಾಕೆಟ್ ಧರಿಸಿದ ಪ್ರಕರಣ; ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ಜಾಮೀನು

ಹುಲಿ ಉಗುರಿನ ಲಾಕೆಟ್ ಧರಿಸಿದ ಪ್ರಕರಣ; ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ಜಾಮೀನು

spot_img
- Advertisement -
- Advertisement -

ಬೆಂಗಳೂರು: ಹುಲಿ ಉಗುರಿನ ಲಾಕೆಟ್ ಧರಿಸಿದ ಆರೋಪದಡಿ ಕನ್ನಡದ ಜೈಲು ಸೇರಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ಜಾಮೀನು ದೊರೆತಿದೆ. 2ನೆ ಎಸಿಜೆಎಂ ನ್ಯಾಯಾಲಯವು ಶುಕ್ರವಾರ ಆದೇಶ ಹೊರಡಿಸಿದೆ. 4 ಸಾವಿರ ರೂಪಾಯಿ ನಗದು ಭದ್ರತೆ ಅಥವಾ ಒಬ್ಬರ ಶ್ಯೂರಿಟಿ ಒದಗಿಸುವಂತೆ ನ್ಯಾಯಾಲಯ ಷರತ್ತು ಹಾಕಲಾಗಿದೆ.

ಹುಲಿ ಉಗುರು ಪೆಂಡೆಂಟ್ ಹೊಂದಿರುವ ದೂರು ಬಂದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಸಂತೋ‌ಷ್ ನನ್ನು ಭಾನುವಾರ ರಾತ್ರಿ ಬಂಧಿಸಿದ್ದರು. ಈ ವೇಳೆ ಸಂತೋಷ್ ಧರಿಸಿದ ಹುಲಿ ಉಗುರನ್ನು ವಶಕ್ಕೆ ಪಡೆದುಕೊಂಡಿದ್ದರು. ಆ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಬಂಧನವಾಗುತ್ತಿದ್ದಂತೆ ಜಾಮೀನು ಕೋರಿ ಸಂತೋಷ್ ಅರ್ಜಿ ಸಲ್ಲಿಸಿದ್ದರು.

ಸಂತೋಷ್ ಪರ ವಕೀಲ ನಟರಾಜ್ ಹಾಗೂ ಸರಕಾರಿ ಅಭಿಯೋಜಕರು ನ್ಯಾಯಾಲಯದ ಮುಂದೆ ವಿಚಾರಣೆ ಮಂಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಯ ಆದೇಶವನ್ನು ಶುಕ್ರವಾರಕ್ಕೆ ಕಾಯ್ದಿರಿಸಿತ್ತು

- Advertisement -
spot_img

Latest News

error: Content is protected !!