Thursday, June 25, 2026
Homeಕರಾವಳಿಬೆಳ್ತಂಗಡಿ; ಹದಗೆಟ್ಟ ಮಂಗಳೂರು - ಶಿರಾಡಿ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ  ದುರಸ್ತಿಗೆ ಕೇಂದ್ರ ಸಚಿವ...

ಬೆಳ್ತಂಗಡಿ; ಹದಗೆಟ್ಟ ಮಂಗಳೂರು – ಶಿರಾಡಿ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ  ದುರಸ್ತಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಹೆಗ್ಗಡೆಯವರಿಂದ ಪತ್ರ; ವೀರೇಂದ್ರ ಹೆಗ್ಗಡೆಯವರ ಪತ್ರಕ್ಕೆ ಸಿಕ್ತು ನಿತಿನ್ ಗಡ್ಕರಿ ಅವರಿಂದ ಸ್ಪಂದನೆ

- Advertisement -
- Advertisement -

ಬೆಳ್ತಂಗಡಿ; ತೀರಾ ಹದಗೆಟ್ಟಿರುವ  ಮಂಗಳೂರು – ಶಿರಾಡಿ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಕ್ಷಣ ದುರಸ್ತಿಗೊಳಿಸಲು ಅನುದಾನ ನೀಡುವಂತೆ ರಾಜ್ಯಸಭಾ ಸದಸ್ಯರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರಿಗೆ ಪತ್ರ ಬರೆದಿದ್ದರು.ಪತ್ರದಲ್ಲಿ ಸದ್ಯ ಮಳೆ ನಿಂತಿದ್ದು ರಸ್ತೆ ದುರಸ್ತಿಗೆ ಸಕಾಲವಾಗಿದೆ ಎಂದು ಹೆಗ್ಗಡೆಯವರು ತಿಳಿಸಿದ್ದರು.

ಹೆಗ್ಗಡೆಯವರ ಪತ್ರಕ್ಕೆ ತಕ್ಷಣ ಸ್ಪಂದಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಬಗ್ಗೆ ಪರಿಶೀಲಸಿ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಪತ್ರ ಮೂಲಕ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!