- Advertisement -
- Advertisement -
ಮಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಗೆ ಇಂದು 73ನೇ ವರ್ಷದ ಜನ್ಮದಿನದ ಸಂಭ್ರಮ. ಈ ಹಿನ್ನೆಲೆಯಲ್ಲಿ ಗಣ್ಯರು ಪೂಜ್ಯ ಖಾವಂದರಿಗೆ ಶುಭಾಶಯಗಳನ್ನು ಕೋರುತ್ತಿದ್ದಾರೆ. ಅಂತೆಯೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೂಡ ವಿರೇಂದ್ರ ಹೆಗ್ಗಡೆಯವರಿಗೆ ಶುಭಾಶಯ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರ ಜನ್ಮದಿನದಂದು ಅವರಿಗೆ ಭಕ್ತಿಪೂರ್ವಕ ಶುಭಕಾಮನೆಗಳು. ಶ್ರೀ ಮಂಜುನಾಥ ಸ್ವಾಮಿಯು ತಮಗೆ ಉತ್ತಮ ಆರೋಗ್ಯವನ್ನು, ಶಿಕ್ಷಣ, ಸ್ತ್ರೀಶಕ್ತಿ, ಗ್ರಾಮೀಣಾಭಿವೃದ್ಧಿ ಮೊದಲಾದ ಹಲವಾರು ಕ್ಷೇತ್ರಗಳಲ್ಲಿ ನಿಮ್ಮ ಸೇವಾಕೈಂಕರ್ಯ ಇನ್ನೂ ದೀರ್ಘಕಾಲ ಯಶಸ್ವಿಯಾಗಿ ಮುಂದುವರಿಯುವಂತೆ ಹರಸಲಿ ಎಂದು ಬರೆದುಕೊಂಡಿದ್ದಾರೆ.
- Advertisement -