- Advertisement -
- Advertisement -
ಬೆಳ್ತಂಗಡಿ : ವೇಣೂರು ವಲಯ ಮತ್ತು ಬೆಳ್ತಂಗಡಿ ವಲಯದ ಇಬ್ಬರು ಅರಣ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಚ್.ಎಸ್ ತ್ಯಾಗರಾಜ್ ಅವರನ್ನು ಯಾವುದೇ ಜಾಗ ನೀಡದೆ ಪ್ರಾಧಿಕಾರಕ್ಕೆ ವರದಿ ಮಾಡಲು ಆದೇಶ ಮಾಡಲಾಗಿದೆ. ಈ ಜಾಗಕ್ಕೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವಲಯ ಅರಣ್ಯಾಧಿಕಾರಿಯಾಗಿರುವ ಬಿ.ಜಿ.ಮೋಹನ್ ಕುಮಾರ್ ಅವರನ್ನು ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿ ನೇಮಕ ಮಾಡಿದೆ.
ವೇಣೂರು ವಲಯ ಅರಣ್ಯಾಧಿಕಾರಿಯಾಗಿದ್ದ ಶ್ರೀ ಮಹೀಮ್ ಎಮ್ ಜನ್ನು ಅವರನ್ನು ದಾಂಡೇಲಿ ವಲಯ ಅರಣ್ಯಾಧಿಕಾರಿ ಲೀಗಲ್&ಐ.ಸಿ.ಟಿ ಗೆ ವರ್ಗಾವಣೆ ಮಾಡಲಾಗಿದೆ. ಈ ಜಾಗಕ್ಕೆ ಉಡುಪಿ ವಲಯ ಅರಣ್ಯಾಧಿಕಾರಿಯಾಗಿರುವ ಶ್ರೀ ಸುಬ್ರಹ್ಮಣ್ಯ ಆಚಾರಿ ಅವರನ್ನು ವೇಣೂರು ವಲಯ ಅರಣ್ಯಾಧಿಕಾರಿಯಾಗಿ ನೇಮಕ ಮಾಡಿದೆ.
- Advertisement -