- Advertisement -
- Advertisement -
ಬೆಂಗಳೂರು: ಹಿರಿಯ ನಟ ದ್ವಾರಕೀಶ್ ಹೃದಯಾಘಾತದಿಂದ ಇಂದು ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ.
ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿದ್ದ ದ್ವಾರಕೀಶ್ ಅವರಿಗೆ 81 ವರ್ಷ ವಯಸ್ಸಾಗಿತ್ತು. 1942 ರಲ್ಲಿ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದ್ದ ದ್ವಾರಕೀಶ್, 1962 ರಲ್ಲಿ ಸ್ಯಾಂಡಲ್ ವುಡ್ ಪ್ರವೇಶಿಸಿದ್ದರು.
ಕನ್ನಡ ಮತ್ತು ತಮಿಳು ಚಿತ್ರಗಳನ್ನು ನಿರ್ಮಾಣ ಮಾಡಿದ್ದ ದ್ವಾರಕೀಶ್, ವಿಷ್ಣುವರ್ಧನ್ ಮತ್ತು ದ್ವಾರಕೀಶ್ ಜೋಡಿ ಸ್ಯಾಂಡಲ್ ವುಡ್ ನಲ್ಲಿ ಜನಪ್ರಿಯವಾಗಿತ್ತು.
ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದ ದ್ವಾರಕೀಶ್ ಕನ್ನಡ ಚಿತ್ರರಂಗದ ಕುಳ್ಳ ಎಂದೇ ಜನಪ್ರಿಯರಾಗಿದ್ದರು.
- Advertisement -